March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರತೆಯ ವಿಚಾರವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.

ಹಿಂದೆ ಸರಕಾರ ರಬ್ಬರು ಕೃಷಿಗೆ ಹೆಚ್ಚಿನ ಮಹತ್ವ ನೀಡಿ ಸಹಾಯಧನ, ಸಾಲ ಹಾಗೂ ಇತರ ಪ್ರೋತ್ಸಾಹದೊಂದಿಗೆ ರಬ್ಬರು ಬೆಳೆಗೆ ಉತ್ತೇಜನ ನೀಡಿ ಹೆಚ್ಚಿನ ಕೃಷಿಕರು ತೊಡಗಿಸಿಕೊಳ್ಳುವಂತೆ ಮಾಡಲಾಗಿತ್ತು. ಇದೀಗ ರಬ್ಬರು ಆದಾಯ ಕೃಷಿ ಖರ್ಚು-ವೆಚ್ಚ ಸರಿದೂಗಿಸದೇ ಇದ್ದು ಅವಲಂಬಿತ ಕೃಷಿಕರು ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಇದೀಗ ರಬ್ಬರು ಕೃಷಿಯನ್ನು ಹೊಸದಾಗಿ ಪ್ರಾರಂಭಿಸಲು ಆಸಕ್ತಿ ತೋರಿಸದೇ ಇರವ ಬಗ್ಗೆ ವಿವರಿಸಲಾಯಿತು. ಅಂತೆಯೇ ಕೇರಳ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರೋತ್ಸಾಹಧನ ಯೋಜನೆಯನ್ನು ನಮ್ಮರಾಜ್ಯದಲ್ಲಿಯೂ ಜಾರಿಗೊಳಿಸಿ ಬೆಳೆಗಾರರನ್ನು ರಕ್ಷಿಸುವಂತೆ ವಿನಂತಿಸಲಾಯಿತು.

ಈ ಸಂಧರ್ಭದಲ್ಲಿ ವೇದಿಕೆಯ ಸಲಹೆಗಾರರಾದ ಹಿರಿಯ ಅರ್ಥಿಕತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ರಬ್ಬರು ಮಂಡಳಿ ಸದಸ್ಯರಾದ ಮುಳಿಯ ಕೇಶವ ಭಟ್, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿಗಳಾದ ರಾಜು ಶೆಟ್ಟಿ ಉಜಿರೆ, ವಿಜಯ ಕೃಷ್ಣ ಪೆರಾಜೆ ಮತ್ತು ರಾಕೇಶ್ ಮೆಟ್ಟಿನಡ್ಕ ಉಪಸ್ಥಿತರಿದ್ದರು.

Related posts

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!