September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರತೆಯ ವಿಚಾರವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.

ಹಿಂದೆ ಸರಕಾರ ರಬ್ಬರು ಕೃಷಿಗೆ ಹೆಚ್ಚಿನ ಮಹತ್ವ ನೀಡಿ ಸಹಾಯಧನ, ಸಾಲ ಹಾಗೂ ಇತರ ಪ್ರೋತ್ಸಾಹದೊಂದಿಗೆ ರಬ್ಬರು ಬೆಳೆಗೆ ಉತ್ತೇಜನ ನೀಡಿ ಹೆಚ್ಚಿನ ಕೃಷಿಕರು ತೊಡಗಿಸಿಕೊಳ್ಳುವಂತೆ ಮಾಡಲಾಗಿತ್ತು. ಇದೀಗ ರಬ್ಬರು ಆದಾಯ ಕೃಷಿ ಖರ್ಚು-ವೆಚ್ಚ ಸರಿದೂಗಿಸದೇ ಇದ್ದು ಅವಲಂಬಿತ ಕೃಷಿಕರು ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಇದೀಗ ರಬ್ಬರು ಕೃಷಿಯನ್ನು ಹೊಸದಾಗಿ ಪ್ರಾರಂಭಿಸಲು ಆಸಕ್ತಿ ತೋರಿಸದೇ ಇರವ ಬಗ್ಗೆ ವಿವರಿಸಲಾಯಿತು. ಅಂತೆಯೇ ಕೇರಳ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರೋತ್ಸಾಹಧನ ಯೋಜನೆಯನ್ನು ನಮ್ಮರಾಜ್ಯದಲ್ಲಿಯೂ ಜಾರಿಗೊಳಿಸಿ ಬೆಳೆಗಾರರನ್ನು ರಕ್ಷಿಸುವಂತೆ ವಿನಂತಿಸಲಾಯಿತು.

ಈ ಸಂಧರ್ಭದಲ್ಲಿ ವೇದಿಕೆಯ ಸಲಹೆಗಾರರಾದ ಹಿರಿಯ ಅರ್ಥಿಕತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ರಬ್ಬರು ಮಂಡಳಿ ಸದಸ್ಯರಾದ ಮುಳಿಯ ಕೇಶವ ಭಟ್, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿಗಳಾದ ರಾಜು ಶೆಟ್ಟಿ ಉಜಿರೆ, ವಿಜಯ ಕೃಷ್ಣ ಪೆರಾಜೆ ಮತ್ತು ರಾಕೇಶ್ ಮೆಟ್ಟಿನಡ್ಕ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನ ಸ್ವಚ್ಛ ಸಂಕೀರ್ಣದಲ್ಲಿ ಸಾಕಲಾದ ನಾಟಿ ಕೋಳಿಗಳ ಮಾರಾಟ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಆ.26-28: ರಾ.ಹಿಂ.ಜಾ.ವೇದಿಕೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 28ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya
error: Content is protected !!