July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರತೆಯ ವಿಚಾರವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.

ಹಿಂದೆ ಸರಕಾರ ರಬ್ಬರು ಕೃಷಿಗೆ ಹೆಚ್ಚಿನ ಮಹತ್ವ ನೀಡಿ ಸಹಾಯಧನ, ಸಾಲ ಹಾಗೂ ಇತರ ಪ್ರೋತ್ಸಾಹದೊಂದಿಗೆ ರಬ್ಬರು ಬೆಳೆಗೆ ಉತ್ತೇಜನ ನೀಡಿ ಹೆಚ್ಚಿನ ಕೃಷಿಕರು ತೊಡಗಿಸಿಕೊಳ್ಳುವಂತೆ ಮಾಡಲಾಗಿತ್ತು. ಇದೀಗ ರಬ್ಬರು ಆದಾಯ ಕೃಷಿ ಖರ್ಚು-ವೆಚ್ಚ ಸರಿದೂಗಿಸದೇ ಇದ್ದು ಅವಲಂಬಿತ ಕೃಷಿಕರು ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಇದೀಗ ರಬ್ಬರು ಕೃಷಿಯನ್ನು ಹೊಸದಾಗಿ ಪ್ರಾರಂಭಿಸಲು ಆಸಕ್ತಿ ತೋರಿಸದೇ ಇರವ ಬಗ್ಗೆ ವಿವರಿಸಲಾಯಿತು. ಅಂತೆಯೇ ಕೇರಳ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರೋತ್ಸಾಹಧನ ಯೋಜನೆಯನ್ನು ನಮ್ಮರಾಜ್ಯದಲ್ಲಿಯೂ ಜಾರಿಗೊಳಿಸಿ ಬೆಳೆಗಾರರನ್ನು ರಕ್ಷಿಸುವಂತೆ ವಿನಂತಿಸಲಾಯಿತು.

ಈ ಸಂಧರ್ಭದಲ್ಲಿ ವೇದಿಕೆಯ ಸಲಹೆಗಾರರಾದ ಹಿರಿಯ ಅರ್ಥಿಕತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ರಬ್ಬರು ಮಂಡಳಿ ಸದಸ್ಯರಾದ ಮುಳಿಯ ಕೇಶವ ಭಟ್, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿಗಳಾದ ರಾಜು ಶೆಟ್ಟಿ ಉಜಿರೆ, ವಿಜಯ ಕೃಷ್ಣ ಪೆರಾಜೆ ಮತ್ತು ರಾಕೇಶ್ ಮೆಟ್ಟಿನಡ್ಕ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಮಾನ್ಯತೆ ರದ್ದಾದ ಕಾಲೇಜು ಕೋಡ್ ನಲ್ಲಿ ಯಾವುದೇ ದಾಖಲಾತಿ ಆಗಿಲ್ಲ: ಅದರ ಮಾನ್ಯತೆ ರದ್ದಿಗೆ ನಾವೇ ಅರ್ಜಿ ಹಾಕಿದ್ದೆವು- ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಯಾವುದೇ ಗೊಂದಲ ಬೇಡಾ: ಎಕ್ಸೆಲ್ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ

Suddi Udaya

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

Suddi Udaya

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!