25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

ಬೆಳ್ತಂಗಡಿ: ಬ್ಯಾಂಕಿನಲ್ಲಿ ನಗದು ವಹಿವಾಟು ತಗ್ಗಿಸುವ ನಿಟ್ಟಿನಲ್ಲಿ ಎಟಿಎಂ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ. ಕೆನರಾ ಬ್ಯಾಂಕ್ ಗ್ರಾಹಕರ ಆರ್ಥಿಕ ಹೃದಯ ಮಾತ್ರವಲ್ಲ, ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಧ್ಯವಿರುವ ಎಲ್ಲಾ ರೀತಿಯ ಸಹಾಯ ಮಾಡುವ ಜವಾಬ್ದಾರಿಯನ್ನು ಹೊಂದಿದೆ ಎಂದು ಬೆಂಗಳೂರು ಕೆನರಾ ಬ್ಯಾಂಕಿನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಭವೇಂದ್ರ ಕುಮಾರ್ ಹೇಳಿದರು.

ಅವರು ನ.5 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ನಿರ್ಮಿಸಿದ ಕೆನರಾ ಬ್ಯಾಂಕಿನ ಸಿರಿ ಎಟಿಎಂ ಉದ್ಘಾಟಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ ಎಂ.ಡಿ ಮಾತನಾಡಿ ಅತ್ಯಾಧುನಿಕ ಬ್ಯಾಂಕಿಂಗ್ ಪರಿಹಾರಗಳನ್ನು ಒದಗಿಸುವುದು, ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳುವುದು, ವ್ಯವಹಾರವನ್ನು ಸುಲಭಗೊಳಿಸಲು ಸಹಾಯ ಮಾಡುವುದು ಮತ್ತು ಸಮಗ್ರ ಬೆಳವಣಿಗೆಯ ಮೂಲಕ ಕೆನರಾ ಬ್ಯಾಂಕ್ ದೇಶದ ಜನರಿಗೆ ಶಕ್ತಿ ತುಂಬುವ ಕೆಲಸ ಮಾಡಿದೆ.ನಮ್ಮ ಸಿರಿ ಸಂಸ್ಥೆಯಲ್ಲಿ ಸಿರಿ ಎಟಿಎಂ ಸ್ಥಾಪನೆಯಾಗಿದ್ದರಿಂದ ನಗದು ವ್ಯವಹಾರಕ್ಕೆ ಸುಲಭವಾಗಿದೆ ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಸರ್ಕಲ್ ಆಪೀಸ್ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಮಂಜುನಾಥ್,ಬೆಂಗಳೂರು ಚೀಫ್ ಜನರಲ್ ಮ್ಯಾನೇಜರ್ ಶಂಭುಲಾಲ್, ಪುತ್ತೂರು ರಿಜೀನಲ್ ಆಫೀಸ್ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಂಜನ್ ಕುಮಾರ್ ,ಬೆಳ್ತಂಗಡಿ ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಪ್ರತಾಪ್, ಮಂಗಳೂರು ಸರ್ಕಲ್ ಆಫೀಸ್ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ನರೇಶ್ , ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕ ರಾಜೇಶ್ ಪೈ ಉಜಿರೆ, ಪುತ್ತೂರು ಡಿವಿಜಿನಲ್ ಮ್ಯಾನೇಜರ್ ಅಜಿತ್ ಕುಮಾರ್, ರುಡ್ ಸೆಟ್ ಎಕ್ಸಿಕ್ಯುಟಿವ್ ಡೈರೆಕ್ಟರ್ ವಿಜಯ್ ಕುಮಾರ್, ರುಡ್ ಸೆಟ್ ಡೈರೆಕ್ಟರ್ ಅಜೇಯ, ಪುತ್ತೂರು ರೀಜನಲ್ ಆಫೀಸ್ ಮಾರ್ಕೆಟಿಂಗ್ ಮ್ಯಾನೇಜರ್ ಹರೀಶ್ ನಾಯ್ಕ್, ಸಿರಿ ಸಂಸ್ಥೆಯ ಸಿಇಓ ಪ್ರಸನ್ನ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya
error: Content is protected !!