22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

ಉಜಿರೆ: ಮಾನವನ ಸೃಷ್ಟಿ ಅದ್ಭುತ, ಆತನ ಬುದ್ಧಿ ಮಹತ್ವವಾದದ್ದು, ಯಂತ್ರದ ಬಳಕೆ ಮೂಲಕ ಜಗತ್ತಿಗೆ ಎದುರಾಗುವ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯ ಆವನಲ್ಲಿದೆ, ಜೊತೆಗೆ ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆ ಮೂಲಕ ಶೈಕ್ಷಣಿಕ ಕ್ಷೇತ್ರವಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ಣ ಸಾಧನೆ ಸಾಧ್ಯವಾಗಿಸಿದ್ದಾನೆ. ಕಾಲೇಜಲ್ಲಿ ಚಾಲನೆಗೊಂಡ ಡಿಜಿಟಲ್ ಗ್ರಂಥಾಲಯದ ಸರಿಯಾದ ಬಳಕೆ ನಿಮ್ಮಿಂದಾಗಲಿಯೆಂದು, ಅತಿಥಿಯಾಗಿ ಆಗಮಿಸಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ ನೀಡಿದ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಪ್ರಮೋದ್ ಕುಮಾರ್ ಹೇಳಿದರು.

ಎಸ್. ಡಿ. ಎಂ. ಪದವಿ ಕಾಲೇಜಿನ ಗಣಕಶಾಸ್ತ್ರ ಮುಖ್ಯಸ್ಥ ಶೈಲೇಶ್ ಕುಮಾರ್ ಜೊತೆಗಿದ್ದು ಸಹಕರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಅಧ್ಯಕ್ಷತೆ ವಹಿಸಿ ಸಂಸ್ಥೆ ವಿದ್ಯಾರ್ಥಿಗಳಿಗಾಗಿ ಎಲ್ಲಾ ರೀತಿಯಲ್ಲೂ ಶ್ರಮಿಸುತ್ತಿದ್ದು, ವಿದ್ಯಾರ್ಥಿಗಳು ಅದರ ಪೂರ್ಣ ಪ್ರಯೋಜನ ಪಡೆದುಕೊಳ್ಳುವುದು ಬಹಳ ಮುಖ್ಯ ಎಂದರು.
ಅತಿಥಿಗಳ ಸಾಧನೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ ಪಡೆದ ಪ್ರಮೋದ್ ಕುಮಾರ್ ಹಾಗೂ ರಾಷ್ಟ್ರೀಯ ಮಟ್ಟದ ವ್ಯಂಗ್ಯಚಿತ್ರಕಾರ ಪ್ರಶಸ್ತಿ ಪಡೆದ ಶೈಲೇಶ್ ಕುಮಾರ್ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಂಥಪಾಲಕರಾದ ಗಿರಿಧರ್ ಸಹಕರಿಸಿದರು.

ಗಣಕ ಶಾಸ್ತ್ರದ ಉಪನ್ಯಾಸಕ ಪವಿತ್ರ ಕುಮಾರ್ ವಂದಿಸಿದರು. ಕಾಲೇಜಿನ ವಿದ್ಯಾರ್ಥಿ ನಿಖಿಲ್ ನಿರೂಪಿಸಿದರು.

Related posts

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya
error: Content is protected !!