22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

ಬೆಳ್ತಂಗಡಿ: ಕಂಠೀರವ ಕ್ರೀಡಾಂಗಣದಲ್ಲಿ ನ.4 ರಂದು ನಡೆದ ಕೂಟದಲ್ಲಿ ದಕ್ಷಿಣ ಕನ್ನಡದ ಅದ್ವಿಕಾ ಕೆ.ಪಿ. ನಾಲ್ಕನೇ ಆವೃತ್ತಿಯ 14 ವಯೋಮಿತಿ ಕರ್ನಾಟಕ ಮಿನಿ ಕ್ರೀಡಾಕೂಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಬಾಲಕಿಯರ 100ಮೀ. ಓಟದ ವಿಭಾಗದಲ್ಲಿ ಸ್ವರ್ಣ ಪದಕ ಗೆದ್ದುಕೊಂಡರು. ಈ ಮೂಲಕ ಕ್ರೀಡಾಕೂಟದ ಅತಿವೇಗದ ಓಟಗಾರ್ತಿ ಎನಿಸಿದರು.

ಇವರು ಮಂಗಳ ಕ್ರೀಡಾಂಗಣದ ಮಂಗಳ ಅಥ್ಲೆಟಿಕ್ ಕ್ಲಬ್ ನಲ್ಲಿ ಅಂತರರಾಷ್ಟ್ರೀಯ ಕೋಚ್ ದಿನೇಶ್ ಕುಂದರ್ ರವರಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದವರಾಗಿದ್ದು ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಡಾ. ಅರುಣ್ ಕೆಪಿ ಮತ್ತು ಗೀತಾ ದಂಪತಿಯ ಸುಪುತ್ರಿಯಾಗಿದ್ದು, ಸೈಂಟ್ ಆಗ್ನೆಸ್ ಸಿಬಿಎಸ್ಸಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Related posts

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

Suddi Udaya
error: Content is protected !!