25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

ಬೆಳ್ತಂಗಡಿ: ಮಂಗಳೂರಿನ ಶಕ್ತಿನಗರದಲ್ಲಿರುವ ಎನಿಮಲ್ ಕೇರ್ ಟ್ರಸ್ಟ್ ಬೆಳ್ತಂಗಡಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ನ. 9ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಉಜಿರೆ ಬಸ್‌ ಸ್ಟ್ಯಾಂಡ್ ಬಳಿ ಸಂಧ್ಯಾ ಟ್ರೇಡರ್ಸ ಎದುರು, ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ ಏರ್ಪಡಿಸಿದೆ.

ಎಲ್ಲಾ ಮರಿಗಳಿಗೆ ರೋಗ ನಿರೋಧಕ ಚುಚ್ಚು ಮದ್ದುಗಳನ್ನು ನೀಡಲಾಗಿರುತ್ತದೆ. ಎನಿಮಲ್ ಕೇರ್ ಟ್ರಸ್ಟನವರು ಆದಷ್ಟು ಸಂತಾನವಾಗದಂತೆ ಚಿಕಿತ್ಸೆ ಮಾಡಿದ ಬೆಕ್ಕು/ನಾಯಿ ಮರಿಗಳನ್ನು ತರುವ ಭರವಸೆ ಇತ್ತಿದ್ದಾರೆ. ಒಂದು ವೇಳೆ ಶಿಬಿರಕ್ಕೆ ತಂದಿರುವ ಬೆಕ್ಕು/ ನಾಯಿ ಮರಿಗಳಿಗೆ ಸಂತಾನವಾಗದಂತೆ ಚಿಕಿತ್ಸೆ ಆಗಿರದಿದ್ದರೆ, ಅವರ ಕೇಂದ್ರಕ್ಕೆ ಅವುಗಳನ್ನು ತಂದಲ್ಲಿ, ಉಚಿತವಾಗಿ ಮಾಡಿಕೊಡಲಾಗುವುದು. ಆರ್ಥಿಕವಾಗಿ ದುರ್ಬಲರು ಇದರ ಪ್ರಯೋಜನ ಪಡೆಯಬಹುದು.
ಶಿಬಿರದಲ್ಲಿ ಬೆಕ್ಕು/ನಾಯಿ ಮರಿಗಳನ್ನು ಉಚಿತವಾಗಿ ಪಡೆದುಕೊಳ್ಳ ಬಯಸುವವರು ತಮ್ಮ ವಿಳಾಸದ ನಕಲು ಪತ್ರ ಕೊಡಬೇಕು., ಪಡೆದುಕೊಳ್ಳುವ ಬೆಕ್ಕು/ನಾಯಿ ಮರಿಗಳಿಗೆ ಸಂತಾನವಾಗದAತೆ ಚಿಕಿತ್ಸೆ ಆಗಿರದಿದ್ದರೆ ಅದನ್ನು ಮಾಡಿಸಬೇಕು, ತಿಂಗಳಿಗೊಮ್ಮೆ ಅವುಗಳ ಆರೋಗ್ಯ ವರದಿ ನೀಡಬೇಕು.


ಹೆಚ್ಚಿನ ವಿವರಗಳಿಗೆ ಎನಿಮಲ್ ಕೇರ್ ಟ್ರಸ್ಟ ಸಂಖ್ಯೆ 9902253064 ಸಂಪರ್ಕಿಸಬಹುದು ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭುರವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya
error: Content is protected !!