September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಶಾಸಕ ಹರೀಶ್ ಪೂಂಜ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಸರಕಾರದ ಗಮನ ಸೆಳೆಯಲು ಕೋರಿ ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಹಿಂದೆ ಸರಕಾರ ರಬ್ಬರು ಕೃಷಿಗೆ ಹೆಚ್ಚಿನ ಮಹತ್ವ ನೀಡಿ ಸಹಾಯಧನ, ಸಾಲ ಹಾಗೂ ಇತರ ಪ್ರೋತ್ಸಾಹ ನೀಡಿದ್ದ ರಬ್ಬರು ಬೆಳೆಗೆ ಉತ್ತೇಜನ ನೀಡಿ ಹೆಚ್ಚಿನ ಕೃಷಿಕರು ತೊಡಗಿಕೊಳ್ಳುವಂತೆ ಮಾಡಿದ್ದು, ಇದೀಗ ಅವಲಂಬಿತ ಕೃಷಿಕರು ಅನುಭವಿಸುತ್ತಿರುವ ಸಮಸ್ಯೆ ಹಾಗೂ ಇದೀಗ ರಬ್ಬರು ಕೃಷಿಯನ್ನು ಹೊಸದಾಗಿ ಪ್ರಾರಂಭಿಸಲು ಆಸಕ್ತಿ ತೋರಿಸದೇ ಇರಲು ಕಾರಣಗಳ ಬಗ್ಗೆ ವಿವರಿಸಲಾಯಿತು. ಅಂತೆಯೇ ಕೇರಳ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರೋತ್ಸಾಹಧನ ಯೋಜನೆಯನ್ನು ನಮ್ಮ ರಾಜ್ಯದಲ್ಲಿಯೂ ಜಾರಿಗೊಳಿಸಿ ಬೆಳೆಗಾರರನ್ನು ರಕ್ಷಿಸುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ಅಧ್ಯಕ್ಷ ಶ್ರೀಧರ ಜಿ ಭಿಡೆ ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿ ರಾಜು ಶೆಟ್ಟಿ, ಬೆಳ್ತಂಗಡಿ ರಬ್ಬರ್ ಸೊಸೈಟಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಲಾಯಿಲ: ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ತೆರವಿಗೆ ತಹಶೀಲ್ದಾರ್ ಆದೇಶ; ಕಟ್ಟಡಕ್ಕೆ ನೋಟೀಸ್ ಅಂಟಿಸಿದ ಅಧಿಕಾರಿಗಳು

Suddi Udaya
error: Content is protected !!