26.9 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರತೆಯ ವಿಚಾರವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.

ಹಿಂದೆ ಸರಕಾರ ರಬ್ಬರು ಕೃಷಿಗೆ ಹೆಚ್ಚಿನ ಮಹತ್ವ ನೀಡಿ ಸಹಾಯಧನ, ಸಾಲ ಹಾಗೂ ಇತರ ಪ್ರೋತ್ಸಾಹದೊಂದಿಗೆ ರಬ್ಬರು ಬೆಳೆಗೆ ಉತ್ತೇಜನ ನೀಡಿ ಹೆಚ್ಚಿನ ಕೃಷಿಕರು ತೊಡಗಿಸಿಕೊಳ್ಳುವಂತೆ ಮಾಡಲಾಗಿತ್ತು. ಇದೀಗ ರಬ್ಬರು ಆದಾಯ ಕೃಷಿ ಖರ್ಚು-ವೆಚ್ಚ ಸರಿದೂಗಿಸದೇ ಇದ್ದು ಅವಲಂಬಿತ ಕೃಷಿಕರು ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಇದೀಗ ರಬ್ಬರು ಕೃಷಿಯನ್ನು ಹೊಸದಾಗಿ ಪ್ರಾರಂಭಿಸಲು ಆಸಕ್ತಿ ತೋರಿಸದೇ ಇರವ ಬಗ್ಗೆ ವಿವರಿಸಲಾಯಿತು. ಅಂತೆಯೇ ಕೇರಳ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರೋತ್ಸಾಹಧನ ಯೋಜನೆಯನ್ನು ನಮ್ಮರಾಜ್ಯದಲ್ಲಿಯೂ ಜಾರಿಗೊಳಿಸಿ ಬೆಳೆಗಾರರನ್ನು ರಕ್ಷಿಸುವಂತೆ ವಿನಂತಿಸಲಾಯಿತು.

ಈ ಸಂಧರ್ಭದಲ್ಲಿ ವೇದಿಕೆಯ ಸಲಹೆಗಾರರಾದ ಹಿರಿಯ ಅರ್ಥಿಕತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ರಬ್ಬರು ಮಂಡಳಿ ಸದಸ್ಯರಾದ ಮುಳಿಯ ಕೇಶವ ಭಟ್, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿಗಳಾದ ರಾಜು ಶೆಟ್ಟಿ ಉಜಿರೆ, ವಿಜಯ ಕೃಷ್ಣ ಪೆರಾಜೆ ಮತ್ತು ರಾಕೇಶ್ ಮೆಟ್ಟಿನಡ್ಕ ಉಪಸ್ಥಿತರಿದ್ದರು.

Related posts

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!