22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರತೆಯ ವಿಚಾರವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.

ಹಿಂದೆ ಸರಕಾರ ರಬ್ಬರು ಕೃಷಿಗೆ ಹೆಚ್ಚಿನ ಮಹತ್ವ ನೀಡಿ ಸಹಾಯಧನ, ಸಾಲ ಹಾಗೂ ಇತರ ಪ್ರೋತ್ಸಾಹದೊಂದಿಗೆ ರಬ್ಬರು ಬೆಳೆಗೆ ಉತ್ತೇಜನ ನೀಡಿ ಹೆಚ್ಚಿನ ಕೃಷಿಕರು ತೊಡಗಿಸಿಕೊಳ್ಳುವಂತೆ ಮಾಡಲಾಗಿತ್ತು. ಇದೀಗ ರಬ್ಬರು ಆದಾಯ ಕೃಷಿ ಖರ್ಚು-ವೆಚ್ಚ ಸರಿದೂಗಿಸದೇ ಇದ್ದು ಅವಲಂಬಿತ ಕೃಷಿಕರು ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಇದೀಗ ರಬ್ಬರು ಕೃಷಿಯನ್ನು ಹೊಸದಾಗಿ ಪ್ರಾರಂಭಿಸಲು ಆಸಕ್ತಿ ತೋರಿಸದೇ ಇರವ ಬಗ್ಗೆ ವಿವರಿಸಲಾಯಿತು. ಅಂತೆಯೇ ಕೇರಳ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರೋತ್ಸಾಹಧನ ಯೋಜನೆಯನ್ನು ನಮ್ಮರಾಜ್ಯದಲ್ಲಿಯೂ ಜಾರಿಗೊಳಿಸಿ ಬೆಳೆಗಾರರನ್ನು ರಕ್ಷಿಸುವಂತೆ ವಿನಂತಿಸಲಾಯಿತು.

ಈ ಸಂಧರ್ಭದಲ್ಲಿ ವೇದಿಕೆಯ ಸಲಹೆಗಾರರಾದ ಹಿರಿಯ ಅರ್ಥಿಕತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ರಬ್ಬರು ಮಂಡಳಿ ಸದಸ್ಯರಾದ ಮುಳಿಯ ಕೇಶವ ಭಟ್, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿಗಳಾದ ರಾಜು ಶೆಟ್ಟಿ ಉಜಿರೆ, ವಿಜಯ ಕೃಷ್ಣ ಪೆರಾಜೆ ಮತ್ತು ರಾಕೇಶ್ ಮೆಟ್ಟಿನಡ್ಕ ಉಪಸ್ಥಿತರಿದ್ದರು.

Related posts

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಂಭ್ರಮಾಚರಣೆ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅನಿಮಲ್ ಫಾರ್ಮ್” ಚಲನ ಚಿತ್ರ ಪ್ರದರ್ಶನ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!