22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಾಸಗಳು ಆದಾಗ ಅಗತ್ಯ ಇರುವ ಕಡೆ ವಿದ್ಯುತ್ ಮಾರ್ಗ, ವಿದ್ಯುತ್ ಪರಿವರ್ತಕ, ಕಂಬಗಳ ಬದಲಾವಣೆ ಕಾರ್ಯ ಗ್ರಾಹಕರಿಗೆ ಸುರಕ್ಷತೆಯೊಂದಿಗೆ ಗುಣಮಟ್ಟದ ವಿದ್ಯುತ್‌ ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಹೇಳಿದರು.

ಅವರು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ನ 6 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮೆಸ್ಕಾಂ‌ ಅಧ್ಯಕ್ಷನಾಗುವ ಅವಕಾಶವನ್ನು ಸರಕಾರ ಕಲ್ಪಿಸಿಕೊಟ್ಟಿದೆ. ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಆಗಿದೆ. ಸುಮಾರು 1.25 ಲಕ್ಷ ಕನೆಕ್ಷನ್ ಗ್ರಾಹಕರಿದ್ದರೆ.31545 ಕೃಷಿ ಪಂಪ್ ಸೆಟ್ ಗಳಿವೆ. ಹಲವಾರು ಇಂಡಸ್ಟ್ರೀಸ್, ಕಮರ್ಷಿಯಲ್ ಗ್ರಾಹಕರಿದ್ದಾರೆ. ಇವರಿಗೆ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗದಾಗೆ ಕ್ರಮ ಕೈಗೊಳ್ಳಾಗಿದೆ ಎಂದರು.

ಇಗಾಗಲೇ ಸಾವಿರಾರು ಕುಡುಂಬಗಳಿಗೆ ಗೃಹಜ್ಯೋತಿಯ ಸೇವೆ ದೊರೆಯುತ್ತಿದ್ದು ರೂ 3.14 ಕೋಟಿ ಮೊತ್ತ ಮೆಸ್ಕಾಂ ಗೆ ಪಾವತಿ ಮಾಡಿದೆ.ತಾಲೂಕಿನಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ, ಬೇಸಿಗೆ ಕಾಲದಲ್ಲಿ ಲೋ ವೋಲ್ಟೇಜ್ ಸಮಸ್ಯೆಯನ್ನು ಪರಿಹರಿಸಲು ಕ್ರಮ ವಹಿಸಿದ್ದು ಇಗಾಗಲೇ ಕುತ್ಲೂರು ಮತ್ತು ಕಕ್ಕಿಂಜೆಯಲ್ಲಿ 110 ಕೆವಿ ಸಬ್ ಸ್ಟೇಷನ್ ಮಾಡಲಾಗುತ್ತಿದೆ. 11ಕೆವಿ ಇದ್ದ ಪೀಡರ್ ಗಳನ್ನು 41ಕೆವಿ ಪೀಡರ್ಗಳಾಗಿ ಪರಿವರ್ತಿಸುವ ಕುರಿತು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಬೆಳ್ತಂಗಡಿ ತಾಲೂಕಿನ ರೈತಾಪಿ ವರ್ಗ ಹಾಗೂ ಕಮರ್ಷಿಯಲ್ ಗ್ರಾಹಕರಿಗೆ ವಿದ್ಯುತ್ ಸರಬರಾಜನ್ನು ಹೆಚ್ಚಿಸುವ ಸಲುವಾಗಿ ಇಲ್ಲೆ ಡಿವಿಜನ್ ಮಾಡಲು ನಿರ್ದೇತಿಸಲಾಗಿದೆ.2 ಸೆಟ್ ಪೀಡರ್ ಇದೆ,4967 ಟ್ರಾನ್ಸಫರ್ ಇದೆ.ಸುಮಾರು 31545 ಕೃಷಿ ಪಂಪ್ ಸೆಟ್ ಗಳಿವೆ ಎಂದರು.ಇಲ್ಲಿನ ಲೋ ವೋಲ್ಟೇಜ್ ಸಮಸ್ಯೆಗಳನ್ನು ನಿವಾರಿಸಲು ಸುಮಾರು ಒಂದು ಸಾವಿರ ಟ್ರಾನ್ಸಫರ್ ಗಳು ಬೇಕಾಗಿರುವುದರಿಂದ ಅದರ ಬಗ್ಗೆ ಯೋಚಿಸಲಾಗಿದೆ. ಸಬ್ ಸ್ಟೇಷನ್ ಹೆಚ್ಚು ಮಾಡಲು ಪ್ರಯತ್ನಿಸುತ್ತಿದ್ದು ಇಂದಬೆಟ್ಟು,ನಿನ್ನಿಕಲ್ಲುವುನಲ್ಲಿ ಕೂಡ ಮಾಡಲಾಗುವುದು ಎಂದರು.ಐದು ಬೆಸ್ಕಾಂ ಗಳಲ್ಲಿ ಮೆಸ್ಕಾಂ ಮಾತ್ರ ಲಾಭದಾಯಕವಾಗಿದ್ದು ರೂ 12.72 ಕೋಟಿಯಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ.

ಪವರ್ ಮ್ಯಾನ್ ಗಳ ಕೊರತೆಯಿಂದ ವಿದ್ಯುತ್ ವ್ಯತ್ಯಾಸ ಕಂಡು ಬರುತ್ತಿದ್ದು 125 ಪವರ್ ಮ್ಯಾನ್ ಗಳು ಬೇಕಾಗಿದೆ.ನಮ್ಮ ದಕ ಜಿಲ್ಲೆಯಲ್ಲಿ ಪವರ್ ಮ್ಯಾನ್ ಹುದ್ದೆಗೆ ಅರ್ಜಿ ಹಾಕುವವರ ಸಂಖ್ಯೆ ವಿರಳವಾಗಿದೆ. ಇಗಾಗಲೇ 400 ಜನರು ನೇಮಕವಾದರು, 390 ಮಂದಿ ವರ್ಗಾವಣೆ ತೆಗೆದುಕೊಂಡಿದ್ದಾರೆ ಎಂದರು.ವಿದ್ಯುತ್ ಗ್ರಾಹಕರಿಗೆ ಒಳ್ಳೆಯ ಸರ್ವೀಸ್ ನೀಡುವುದೇ ನಮ್ಮ‌ ಮೊದಲ ಆದ್ಯತೆಯಾಗಿದೆ.ಮೆಸ್ಕಾಂ ಎಂದಾಗ ಸಮಸ್ಯೆಗಳು ಖಂಡಿತವಾಗಿ ಬರುತ್ತದೆ. ಅದನ್ನು ಅತ್ಯಂತ ಪ್ರಾಮಾಣಿಕವಾಗಿ, ತಾಳ್ಮೆಯಿಂದ ನಿವಾರಿಸಲು ಪವರ್ ಮ್ಯಾನ್ ಗಳಿಗೆ ಸೂಚನೆ ನೀಡಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್,ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ ಉಪಸ್ಥಿತರಿದ್ದರು.

Related posts

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶಾಖಾ ಮಠ ನಿರ್ಮಾಣ: ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದ ವೀಕ್ಷಣೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್: ಪ್ರಾರಂಭೋತ್ಸವ ಸಮಾರಂಭ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!