25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

ಉಜಿರೆ: ಮಾನವನ ಸೃಷ್ಟಿ ಅದ್ಭುತ, ಆತನ ಬುದ್ಧಿ ಮಹತ್ವವಾದದ್ದು, ಯಂತ್ರದ ಬಳಕೆ ಮೂಲಕ ಜಗತ್ತಿಗೆ ಎದುರಾಗುವ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯ ಆವನಲ್ಲಿದೆ, ಜೊತೆಗೆ ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆ ಮೂಲಕ ಶೈಕ್ಷಣಿಕ ಕ್ಷೇತ್ರವಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ಣ ಸಾಧನೆ ಸಾಧ್ಯವಾಗಿಸಿದ್ದಾನೆ. ಕಾಲೇಜಲ್ಲಿ ಚಾಲನೆಗೊಂಡ ಡಿಜಿಟಲ್ ಗ್ರಂಥಾಲಯದ ಸರಿಯಾದ ಬಳಕೆ ನಿಮ್ಮಿಂದಾಗಲಿಯೆಂದು, ಅತಿಥಿಯಾಗಿ ಆಗಮಿಸಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ ನೀಡಿದ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಪ್ರಮೋದ್ ಕುಮಾರ್ ಹೇಳಿದರು.

ಎಸ್. ಡಿ. ಎಂ. ಪದವಿ ಕಾಲೇಜಿನ ಗಣಕಶಾಸ್ತ್ರ ಮುಖ್ಯಸ್ಥ ಶೈಲೇಶ್ ಕುಮಾರ್ ಜೊತೆಗಿದ್ದು ಸಹಕರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಅಧ್ಯಕ್ಷತೆ ವಹಿಸಿ ಸಂಸ್ಥೆ ವಿದ್ಯಾರ್ಥಿಗಳಿಗಾಗಿ ಎಲ್ಲಾ ರೀತಿಯಲ್ಲೂ ಶ್ರಮಿಸುತ್ತಿದ್ದು, ವಿದ್ಯಾರ್ಥಿಗಳು ಅದರ ಪೂರ್ಣ ಪ್ರಯೋಜನ ಪಡೆದುಕೊಳ್ಳುವುದು ಬಹಳ ಮುಖ್ಯ ಎಂದರು.
ಅತಿಥಿಗಳ ಸಾಧನೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ ಪಡೆದ ಪ್ರಮೋದ್ ಕುಮಾರ್ ಹಾಗೂ ರಾಷ್ಟ್ರೀಯ ಮಟ್ಟದ ವ್ಯಂಗ್ಯಚಿತ್ರಕಾರ ಪ್ರಶಸ್ತಿ ಪಡೆದ ಶೈಲೇಶ್ ಕುಮಾರ್ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಂಥಪಾಲಕರಾದ ಗಿರಿಧರ್ ಸಹಕರಿಸಿದರು.

ಗಣಕ ಶಾಸ್ತ್ರದ ಉಪನ್ಯಾಸಕ ಪವಿತ್ರ ಕುಮಾರ್ ವಂದಿಸಿದರು. ಕಾಲೇಜಿನ ವಿದ್ಯಾರ್ಥಿ ನಿಖಿಲ್ ನಿರೂಪಿಸಿದರು.

Related posts

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya
error: Content is protected !!