September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ. ಬಂಟ್ವಾಳ, ಸರಕಾರಿ ಪ್ರೌಢಶಾಲೆ ನಾವೂರು, ಬಂಟ್ವಾಳ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟವು ನ. 3 ಹಾಗೂ 4 ರಂದು ಬಂಟ್ವಾಳದ ಎಸ್.ವಿ.ಎಸ್ ದೇವಳ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.

ಈ ಕ್ರೀಡಾಕೂಟದಲ್ಲಿ ಎಲ್ ಸಿ ಆರ್ ವಿದ್ಯಾ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಒಟ್ಟು 4 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಬಾಲಕಿಯರ 14ರ ವಯೋಮಾನದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಅಪರ್ಣ ಎ ಶೆಟ್ಟಿ 7 ನೇ ತರಗತಿ ಇವರು ತೃತೀಯ ಸ್ಥಾನ ಪಡೆದರು.

ಬಾಲಕರ 17 ರ ವಯೋಮಾನದ 110 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರೀತಮ್ ಡಿ.ಕೆ ಹತ್ತನೇ ತರಗತಿ ಇವರು ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು. ಹಾಗೂ 17ರ ವಯೋಮಾನದ ಬಾಲಕಿಯರ ಜಾವಲಿನ್ ಎಸೆತದಲ್ಲಿ ಧನ್ವಿತಾ ಎಂಟನೇ ತರಗತಿ ಇವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಎಲ್ ಸಿ ಆರ್ ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ .

Related posts

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ ನಿಂದ ಕ್ರಿಸ್ಮಸ್ ಆಚರಣೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya
error: Content is protected !!