23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

ಬೆಳ್ತಂಗಡಿ: ಮಂಗಳೂರಿನ ಶಕ್ತಿನಗರದಲ್ಲಿರುವ ಎನಿಮಲ್ ಕೇರ್ ಟ್ರಸ್ಟ್ ಬೆಳ್ತಂಗಡಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ನ. 9ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಉಜಿರೆ ಬಸ್‌ ಸ್ಟ್ಯಾಂಡ್ ಬಳಿ ಸಂಧ್ಯಾ ಟ್ರೇಡರ್ಸ ಎದುರು, ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ ಏರ್ಪಡಿಸಿದೆ.

ಎಲ್ಲಾ ಮರಿಗಳಿಗೆ ರೋಗ ನಿರೋಧಕ ಚುಚ್ಚು ಮದ್ದುಗಳನ್ನು ನೀಡಲಾಗಿರುತ್ತದೆ. ಎನಿಮಲ್ ಕೇರ್ ಟ್ರಸ್ಟನವರು ಆದಷ್ಟು ಸಂತಾನವಾಗದಂತೆ ಚಿಕಿತ್ಸೆ ಮಾಡಿದ ಬೆಕ್ಕು/ನಾಯಿ ಮರಿಗಳನ್ನು ತರುವ ಭರವಸೆ ಇತ್ತಿದ್ದಾರೆ. ಒಂದು ವೇಳೆ ಶಿಬಿರಕ್ಕೆ ತಂದಿರುವ ಬೆಕ್ಕು/ ನಾಯಿ ಮರಿಗಳಿಗೆ ಸಂತಾನವಾಗದಂತೆ ಚಿಕಿತ್ಸೆ ಆಗಿರದಿದ್ದರೆ, ಅವರ ಕೇಂದ್ರಕ್ಕೆ ಅವುಗಳನ್ನು ತಂದಲ್ಲಿ, ಉಚಿತವಾಗಿ ಮಾಡಿಕೊಡಲಾಗುವುದು. ಆರ್ಥಿಕವಾಗಿ ದುರ್ಬಲರು ಇದರ ಪ್ರಯೋಜನ ಪಡೆಯಬಹುದು.
ಶಿಬಿರದಲ್ಲಿ ಬೆಕ್ಕು/ನಾಯಿ ಮರಿಗಳನ್ನು ಉಚಿತವಾಗಿ ಪಡೆದುಕೊಳ್ಳ ಬಯಸುವವರು ತಮ್ಮ ವಿಳಾಸದ ನಕಲು ಪತ್ರ ಕೊಡಬೇಕು., ಪಡೆದುಕೊಳ್ಳುವ ಬೆಕ್ಕು/ನಾಯಿ ಮರಿಗಳಿಗೆ ಸಂತಾನವಾಗದAತೆ ಚಿಕಿತ್ಸೆ ಆಗಿರದಿದ್ದರೆ ಅದನ್ನು ಮಾಡಿಸಬೇಕು, ತಿಂಗಳಿಗೊಮ್ಮೆ ಅವುಗಳ ಆರೋಗ್ಯ ವರದಿ ನೀಡಬೇಕು.


ಹೆಚ್ಚಿನ ವಿವರಗಳಿಗೆ ಎನಿಮಲ್ ಕೇರ್ ಟ್ರಸ್ಟ ಸಂಖ್ಯೆ 9902253064 ಸಂಪರ್ಕಿಸಬಹುದು ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭುರವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 57ನೇ ಸಿನಿಮಾ ಬಹು ನಿರೀಕ್ಷಿತ ‘ದಿ ಡೆವಿಲ್’ ಸಿನಿಮಾದಲ್ಲಿ ಪುತ್ತೂರಿನ ಬೆಡಗಿ ರಚನಾ ರೈ ನಾಯಕಿಯಾಗಿ ಅಭಿನಯ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

Suddi Udaya
error: Content is protected !!