September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

ಬೆಳ್ತಂಗಡಿ: ಮಂಗಳೂರಿನ ಶಕ್ತಿನಗರದಲ್ಲಿರುವ ಎನಿಮಲ್ ಕೇರ್ ಟ್ರಸ್ಟ್ ಬೆಳ್ತಂಗಡಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ನ. 9ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಉಜಿರೆ ಬಸ್‌ ಸ್ಟ್ಯಾಂಡ್ ಬಳಿ ಸಂಧ್ಯಾ ಟ್ರೇಡರ್ಸ ಎದುರು, ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ ಏರ್ಪಡಿಸಿದೆ.

ಎಲ್ಲಾ ಮರಿಗಳಿಗೆ ರೋಗ ನಿರೋಧಕ ಚುಚ್ಚು ಮದ್ದುಗಳನ್ನು ನೀಡಲಾಗಿರುತ್ತದೆ. ಎನಿಮಲ್ ಕೇರ್ ಟ್ರಸ್ಟನವರು ಆದಷ್ಟು ಸಂತಾನವಾಗದಂತೆ ಚಿಕಿತ್ಸೆ ಮಾಡಿದ ಬೆಕ್ಕು/ನಾಯಿ ಮರಿಗಳನ್ನು ತರುವ ಭರವಸೆ ಇತ್ತಿದ್ದಾರೆ. ಒಂದು ವೇಳೆ ಶಿಬಿರಕ್ಕೆ ತಂದಿರುವ ಬೆಕ್ಕು/ ನಾಯಿ ಮರಿಗಳಿಗೆ ಸಂತಾನವಾಗದಂತೆ ಚಿಕಿತ್ಸೆ ಆಗಿರದಿದ್ದರೆ, ಅವರ ಕೇಂದ್ರಕ್ಕೆ ಅವುಗಳನ್ನು ತಂದಲ್ಲಿ, ಉಚಿತವಾಗಿ ಮಾಡಿಕೊಡಲಾಗುವುದು. ಆರ್ಥಿಕವಾಗಿ ದುರ್ಬಲರು ಇದರ ಪ್ರಯೋಜನ ಪಡೆಯಬಹುದು.
ಶಿಬಿರದಲ್ಲಿ ಬೆಕ್ಕು/ನಾಯಿ ಮರಿಗಳನ್ನು ಉಚಿತವಾಗಿ ಪಡೆದುಕೊಳ್ಳ ಬಯಸುವವರು ತಮ್ಮ ವಿಳಾಸದ ನಕಲು ಪತ್ರ ಕೊಡಬೇಕು., ಪಡೆದುಕೊಳ್ಳುವ ಬೆಕ್ಕು/ನಾಯಿ ಮರಿಗಳಿಗೆ ಸಂತಾನವಾಗದAತೆ ಚಿಕಿತ್ಸೆ ಆಗಿರದಿದ್ದರೆ ಅದನ್ನು ಮಾಡಿಸಬೇಕು, ತಿಂಗಳಿಗೊಮ್ಮೆ ಅವುಗಳ ಆರೋಗ್ಯ ವರದಿ ನೀಡಬೇಕು.


ಹೆಚ್ಚಿನ ವಿವರಗಳಿಗೆ ಎನಿಮಲ್ ಕೇರ್ ಟ್ರಸ್ಟ ಸಂಖ್ಯೆ 9902253064 ಸಂಪರ್ಕಿಸಬಹುದು ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭುರವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ನೇತ್ರಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ “ಯಾತ್ರಾ ಆತಿಥ್ಯ” ಲೋಕಾರ್ಪಣೆ

Suddi Udaya
error: Content is protected !!