March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಶಾಸಕ ಹರೀಶ್ ಪೂಂಜ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಸರಕಾರದ ಗಮನ ಸೆಳೆಯಲು ಕೋರಿ ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಹಿಂದೆ ಸರಕಾರ ರಬ್ಬರು ಕೃಷಿಗೆ ಹೆಚ್ಚಿನ ಮಹತ್ವ ನೀಡಿ ಸಹಾಯಧನ, ಸಾಲ ಹಾಗೂ ಇತರ ಪ್ರೋತ್ಸಾಹ ನೀಡಿದ್ದ ರಬ್ಬರು ಬೆಳೆಗೆ ಉತ್ತೇಜನ ನೀಡಿ ಹೆಚ್ಚಿನ ಕೃಷಿಕರು ತೊಡಗಿಕೊಳ್ಳುವಂತೆ ಮಾಡಿದ್ದು, ಇದೀಗ ಅವಲಂಬಿತ ಕೃಷಿಕರು ಅನುಭವಿಸುತ್ತಿರುವ ಸಮಸ್ಯೆ ಹಾಗೂ ಇದೀಗ ರಬ್ಬರು ಕೃಷಿಯನ್ನು ಹೊಸದಾಗಿ ಪ್ರಾರಂಭಿಸಲು ಆಸಕ್ತಿ ತೋರಿಸದೇ ಇರಲು ಕಾರಣಗಳ ಬಗ್ಗೆ ವಿವರಿಸಲಾಯಿತು. ಅಂತೆಯೇ ಕೇರಳ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರೋತ್ಸಾಹಧನ ಯೋಜನೆಯನ್ನು ನಮ್ಮ ರಾಜ್ಯದಲ್ಲಿಯೂ ಜಾರಿಗೊಳಿಸಿ ಬೆಳೆಗಾರರನ್ನು ರಕ್ಷಿಸುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ಅಧ್ಯಕ್ಷ ಶ್ರೀಧರ ಜಿ ಭಿಡೆ ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿ ರಾಜು ಶೆಟ್ಟಿ, ಬೆಳ್ತಂಗಡಿ ರಬ್ಬರ್ ಸೊಸೈಟಿ ಉಪಸ್ಥಿತರಿದ್ದರು.

Related posts

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya
error: Content is protected !!