22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರತೆಯ ವಿಚಾರವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.

ಹಿಂದೆ ಸರಕಾರ ರಬ್ಬರು ಕೃಷಿಗೆ ಹೆಚ್ಚಿನ ಮಹತ್ವ ನೀಡಿ ಸಹಾಯಧನ, ಸಾಲ ಹಾಗೂ ಇತರ ಪ್ರೋತ್ಸಾಹದೊಂದಿಗೆ ರಬ್ಬರು ಬೆಳೆಗೆ ಉತ್ತೇಜನ ನೀಡಿ ಹೆಚ್ಚಿನ ಕೃಷಿಕರು ತೊಡಗಿಸಿಕೊಳ್ಳುವಂತೆ ಮಾಡಲಾಗಿತ್ತು. ಇದೀಗ ರಬ್ಬರು ಆದಾಯ ಕೃಷಿ ಖರ್ಚು-ವೆಚ್ಚ ಸರಿದೂಗಿಸದೇ ಇದ್ದು ಅವಲಂಬಿತ ಕೃಷಿಕರು ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಇದೀಗ ರಬ್ಬರು ಕೃಷಿಯನ್ನು ಹೊಸದಾಗಿ ಪ್ರಾರಂಭಿಸಲು ಆಸಕ್ತಿ ತೋರಿಸದೇ ಇರವ ಬಗ್ಗೆ ವಿವರಿಸಲಾಯಿತು. ಅಂತೆಯೇ ಕೇರಳ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರೋತ್ಸಾಹಧನ ಯೋಜನೆಯನ್ನು ನಮ್ಮರಾಜ್ಯದಲ್ಲಿಯೂ ಜಾರಿಗೊಳಿಸಿ ಬೆಳೆಗಾರರನ್ನು ರಕ್ಷಿಸುವಂತೆ ವಿನಂತಿಸಲಾಯಿತು.

ಈ ಸಂಧರ್ಭದಲ್ಲಿ ವೇದಿಕೆಯ ಸಲಹೆಗಾರರಾದ ಹಿರಿಯ ಅರ್ಥಿಕತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ರಬ್ಬರು ಮಂಡಳಿ ಸದಸ್ಯರಾದ ಮುಳಿಯ ಕೇಶವ ಭಟ್, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿಗಳಾದ ರಾಜು ಶೆಟ್ಟಿ ಉಜಿರೆ, ವಿಜಯ ಕೃಷ್ಣ ಪೆರಾಜೆ ಮತ್ತು ರಾಕೇಶ್ ಮೆಟ್ಟಿನಡ್ಕ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!