March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

ಉಜಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಯಾವತ್ತೂ ಶಿಸ್ತು ಮತ್ತು ಸಂಯಮ ಅಧಿಕವಾಗಿದ್ದು ಈ ಗುಣಗಳೇ ಇತರ ವಿದ್ಯಾರ್ಥಿಗಳಿಗಿಂತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ವಿಭಿನ್ನವಾಗಿಸುತ್ತದೆ ಎಂದು ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಹೇಳಿದರು.

ಅವರು ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ದಳಕ್ಕೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ನೀಡುವ ದೀಕ್ಷಾ ಸಮಾರಂಭ ಹಾಗೂ ನಂತರ ನಡೆದ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಮಾತನಾಡುತ್ತಿದ್ದರು.

ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಯಾವಾಗಲೂ ಶಿಸ್ತು ಬದ್ಧರಾಗಿದ್ದು ಅವರು ಇತರೆ ವಿದ್ಯಾರ್ಥಿಗಳಿಗೆ ಪ್ರೇರಕರಾಗಿರಬೇಕು, ಇಂದು ನೀವು ನಮ್ಮ ಧ್ವಜದಡಿಯಲ್ಲಿ ಪ್ರತೀಜ್ಞೆಗೈದಂತೆ ಯಾವತ್ತೂ ಆ ಪ್ರತಿಜ್ಞೆಗೆ ಬಧ್ಧವಾಗಿರುವಂತೆ ಬದುಕಬೇಕು ಎಂದು ಹೇಳಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಸ್ಥಾಪನ ದಿನಾಚರಣೆಯ ನಿಮಿತ್ತ ಧ್ವಜ ಚೀಟಿಯನ್ನು ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಬಿಡುಗೊಡೆಗೊಳಿಸಿ ಮಾತಾನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಯಾವತ್ತೂ ಏಕತೆ ಮುಖ್ಯ, ಈ ದಿನ ನಿಮ್ಮ ಪಾಲಿಗೆ ಸುದಿನ, ಇಂದು ನೀವು ಅಧಿಕೃತವಾಗಿ ಅಂತರಾಷ್ಟ್ರೀಯ ಚಳುವಳಿಯಾದ ಸ್ಕೌಟ್ ಸಂಸ್ಥೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಿರಿ ಇನ್ನೂ ಮುಂದೆ ನಿಮ್ಮ ಜವಾಬ್ಧಾರಿ ಇನ್ನೂ ಹೆಚ್ಚಾಗುತ್ತದೆ ಅದನ್ನು ಸಮರ್ಥವಾಗಿ ನಿರ್ವಹಿಸುವ ಕೌಶಲ್ಯವನ್ನು ಬೆಳೆಸಿಕೊಳ್ಳಿ ಎಂದು ನುಡಿದು ದಳಕ್ಕೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ತಿರುಮಲ ಪ್ರಸಾದ್ ಸಿ.ಹೆಚ್ ಮಾತನಾಡಿ ಯಾವಾಗ ನೀವು ಸ್ಕೌಟ್ ಗೈಡ್ ಚಟುವಟಿಕೆಗಳಲ್ಲಿ ನಿಮ್ಮನ್ನು ನೀವು ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಿರೋ ಅವಾಗ ನಿಮ್ಮ ವ್ಯಕ್ತಿತ್ವ ಪರಿಪೂರ್ಣವಾಗಿ ಪರಿಪಕ್ವಗೊಳ್ಳುತ್ತದೆ ಆದ್ದರಿಂದ ನಿಮ್ಮ ಸಕ್ರಿಯ ತೊಡಗಿಸಿಕೊಳ್ಳುವಿಕೆ ಬಹಳ ಮಹತ್ವ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿ ಶುಭ ಹಾರೈಸಿದರು.

ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಯುನಿಟ್ ಲೀಡರ್‌ಗಳಾದ ಲಕ್ಷ್ಮಿಶ್ ಭಟ್ ಮತ್ತು ಅಂಕಿತಾ ಎಂ.ಕೆ ಇವರ ಮಾರ್ಗದರ್ಶನ ಮತ್ತು ತರಬೇತಿಯಲ್ಲಿ ೨೪ ವಿದ್ಯಾರ್ಥಿಗಳು ರೋವರ್ಸ್ & ರೇಂಜರ್ಸ್ ಪ್ರತಿಜ್ಞೆ ಗೈದು ದೀಕ್ಷೆಯನ್ನು ತೆಗೆದುಕೊಂಡರು.

Related posts

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!