25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದಲ್ಲಿ ಪೃಥ್ವಿ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಬರೆಂಗಾಯ ಸಮುದಾಯ ಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ಉದ್ಘಾಟಿಸಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮ ಸದುಪಯೋಗವನ್ನು ಎಲ್ಲರೂ ಪಡೆಯುವಂತೆ ಶುಭ ಕೋರಿದರು. ತಾಲೂಕಿನ ಯೋಜನಾಧಿಕಾರಿ ಯಶೋಧರ ಜ್ಞಾನ ವಿಕಾಸ ಕಾರ್ಯಕ್ರಮದ ಹಿನ್ನೆಲೆಯ ಬಗ್ಗೆ ಮಾತನಾಡುತ್ತಾ ಕೇಂದ್ರದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಉತ್ತಮ ಮಾಹಿತಿಗಳು ತರಬೇತಿಗಳು ಸಿಗುತ್ತಿದ್ದು ಅವಕಾಶವನ್ನು ಬಾಚಿಕೊಂಡು ಕಾರ್ಯಕ್ರಮದ ಸದುಪಯೋಗವನ್ನು ಪಡೆಯುವಂತೆ ಹಾಗೂ ಸಮಯ ಪಾಲನೆಯನ್ನು ಅಳವಡಿಸಿಕೊಳ್ಳುವ ಬಗ್ಗೆ ಮಾರ್ಗದರ್ಶನ ನೀಡಿದರು.

ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷ ಮಾದಪ್ಪ ಗೌಡ, ಒಕ್ಕೂಟದ ಮಾಜಿ ಅಧ್ಯಕ್ಷ ಶಾಂತರಾಮ್ ರೈ, ಕೇಂದ್ರದ ಸಂಯೋಜಕಿ ಗಾಯತ್ರಿ, ಪಂಚಾಯತಿ ಗ್ರಂಥಾಲಯ ವಿಭಾಗದ ಕಾರ್ಯಕರ್ತರಾದ ಶ್ರೀಮತಿ ಶಕುಂತಲಾ ಉಪಸ್ಥಿತರಿದ್ದರು. ಕೇಂದ್ರದ ದಾಖಲಾತಿಗಳನ್ನು ಹಸ್ತಾಂತರಿಸಲಾಯಿತು. ಸಮನ್ವಯಧಿಕಾರಿ ಮಧುರಾ ವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಗೀತಾ ಸ್ವಾಗತಿಸಿ, ಸೇವಾ ಪ್ರತಿನಿಧಿ ಆಶಲತ ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya
error: Content is protected !!