September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಪ್ರತಿವರ್ಷ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದ್ದು, ಈ ವರ್ಷ 23ನೇ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ನೀಡಿರುವ ವಿಷಯ: ಪ್ರಕೃತಿಯ ಸೊಬಗು. ಸ್ಪರ್ಧೆಯು ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಎಂದು ಪ್ರತ್ಯೇಕ 4 ವಿಭಾಗಗಳಲ್ಲಿ ನಡೆಯಲಿದೆ.

ಪ್ರಕೃತಿಯ ಅತೀ ಸುಂದರವಾದ ದೃಶ್ಯಗಳನ್ನು ಬಿಡಿಸಿ ಕಳುಹಿಸಬಹುದು. 20*4 ಸೆಂ.ಮೀ ಗಾತ್ರದ ಡ್ರಾಯಿಂಗ್ ಶೀಟ್ ಅಥವಾ ಅಂಚೆ ಕಾರ್ಡಿನಲಿ, ಪೆನ್ಸಿಲ್/ ಇಂಡಿಯನ್ ಇಂಕ್, ಜಲವರ್ಣ ಬಳಸಿ ಚಿತ್ರ ಬಿಡಿಸುವುದು. ಶಾಲಾ/ಕಾಲೇಜು ವಿಭಾಗದವರು ಶಾಲಾ ಮುದ್ರೆ ಹಾಗೂ ಮುಖ್ಯಸ್ಥರ ಸಹಿ, ತಮ್ಮ ಪೂರ್ಣ ವಿಳಾಸ ಹಾಗೂ ದೂರವಾಣಿ ಸಂಖ್ಯೆಯೊಂದಿಗೆ ನಿರ್ದೇಶಕರು, ಅಂಚೆ-ಕುಂಚ ವಿಭಾಗ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ- 574216, ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ, ಇವರಿಗೆ ದಿನಾಂಕ: 31-03-2026ರ ಒಳಗಾಗಿ ಕಳುಹಿಸಬೇಕು. ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ, ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಪುರಸ್ಕರಿಸಲಾಗುವುದು ಎಂದು ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ ನಿಧನ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya
error: Content is protected !!