September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

ಧರ್ಮಸ್ಥಳ: ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ಮಾಡಲು ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಎರಡನೇ ಆರೋಪಿ ಮಹಮ್ಮದ್ ಸಿನಾನ್ ರವರ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಳು ಹಾಕಿ ಜಪ್ತಿ ಮಾಡಿದ್ದಾರೆ.

ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು KA-19-MC-5862 ನಂಬರಿನ ರಿಟ್ಜ್ ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್@ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದನ ನೀಡಿದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಜೋಹಾರ ಸೇರಿ ಮೂವರ ವಿರುದ್ಧ ಕಲ5,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ 11,(1)(D) ಪ್ರಾಣಿ ಹಿಂಸೆ ಕಾಯಿದೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿ ಇಬ್ರಾಹಿಂ ಖಲೀಲ @ತೌಸಿಫ್ ಎಂಬಾತನು ಅಕ್ರಮವಾಗಿ ಜಾನುವಾರುಗಳನ್ನು ಮಾಂಸ ಮಾಡಲು ಉದ್ದೇಶಿಸಿದ ಸಜೀಪನಡು ಗ್ರಾಮದ ತಂಚಿಬೆಟ್ಟು ಎಂಬಲ್ಲಿನ ಮನೆಯನ್ನು ಹಾಗೂ ಪ್ರಕರಣದ ಇನ್ನೊಬ್ಬ ಆರೋಪಿ ಮಹಮ್ಮದ್ ಸಿನಾನ್ ಎಂಬಾತನು ಸಜಿಪಪಡು ಗ್ರಾಮದ ಕೋಟೆಕಣಿ ಎಂಬಲ್ಲಿ ಮಾಂಸ ಇಡಲು ಉದ್ದೇಶಿಸಿದ ಕೋಣೆ ಜಪ್ತಿ ಮಾಡಲಾಗಿರುತ್ತದೆ.

Related posts

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

Suddi Udaya

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

Suddi Udaya

ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು :ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

Suddi Udaya
error: Content is protected !!