ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಪ್ರತಿವರ್ಷ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದ್ದು, ಈ ವರ್ಷ 23ನೇ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ನೀಡಿರುವ ವಿಷಯ: ಪ್ರಕೃತಿಯ ಸೊಬಗು. ಸ್ಪರ್ಧೆಯು ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಎಂದು ಪ್ರತ್ಯೇಕ 4 ವಿಭಾಗಗಳಲ್ಲಿ ನಡೆಯಲಿದೆ.
ಪ್ರಕೃತಿಯ ಅತೀ ಸುಂದರವಾದ ದೃಶ್ಯಗಳನ್ನು ಬಿಡಿಸಿ ಕಳುಹಿಸಬಹುದು. 20*4 ಸೆಂ.ಮೀ ಗಾತ್ರದ ಡ್ರಾಯಿಂಗ್ ಶೀಟ್ ಅಥವಾ ಅಂಚೆ ಕಾರ್ಡಿನಲಿ, ಪೆನ್ಸಿಲ್/ ಇಂಡಿಯನ್ ಇಂಕ್, ಜಲವರ್ಣ ಬಳಸಿ ಚಿತ್ರ ಬಿಡಿಸುವುದು. ಶಾಲಾ/ಕಾಲೇಜು ವಿಭಾಗದವರು ಶಾಲಾ ಮುದ್ರೆ ಹಾಗೂ ಮುಖ್ಯಸ್ಥರ ಸಹಿ, ತಮ್ಮ ಪೂರ್ಣ ವಿಳಾಸ ಹಾಗೂ ದೂರವಾಣಿ ಸಂಖ್ಯೆಯೊಂದಿಗೆ ನಿರ್ದೇಶಕರು, ಅಂಚೆ-ಕುಂಚ ವಿಭಾಗ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ- 574216, ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ, ಇವರಿಗೆ ದಿನಾಂಕ: 31-03-2026ರ ಒಳಗಾಗಿ ಕಳುಹಿಸಬೇಕು. ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ, ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಪುರಸ್ಕರಿಸಲಾಗುವುದು ಎಂದು ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.











