23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಪ್ರತಿವರ್ಷ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದ್ದು, ಈ ವರ್ಷ 23ನೇ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ನೀಡಿರುವ ವಿಷಯ: ಪ್ರಕೃತಿಯ ಸೊಬಗು. ಸ್ಪರ್ಧೆಯು ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಎಂದು ಪ್ರತ್ಯೇಕ 4 ವಿಭಾಗಗಳಲ್ಲಿ ನಡೆಯಲಿದೆ.

ಪ್ರಕೃತಿಯ ಅತೀ ಸುಂದರವಾದ ದೃಶ್ಯಗಳನ್ನು ಬಿಡಿಸಿ ಕಳುಹಿಸಬಹುದು. 20*4 ಸೆಂ.ಮೀ ಗಾತ್ರದ ಡ್ರಾಯಿಂಗ್ ಶೀಟ್ ಅಥವಾ ಅಂಚೆ ಕಾರ್ಡಿನಲಿ, ಪೆನ್ಸಿಲ್/ ಇಂಡಿಯನ್ ಇಂಕ್, ಜಲವರ್ಣ ಬಳಸಿ ಚಿತ್ರ ಬಿಡಿಸುವುದು. ಶಾಲಾ/ಕಾಲೇಜು ವಿಭಾಗದವರು ಶಾಲಾ ಮುದ್ರೆ ಹಾಗೂ ಮುಖ್ಯಸ್ಥರ ಸಹಿ, ತಮ್ಮ ಪೂರ್ಣ ವಿಳಾಸ ಹಾಗೂ ದೂರವಾಣಿ ಸಂಖ್ಯೆಯೊಂದಿಗೆ ನಿರ್ದೇಶಕರು, ಅಂಚೆ-ಕುಂಚ ವಿಭಾಗ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ- 574216, ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ, ಇವರಿಗೆ ದಿನಾಂಕ: 31-03-2026ರ ಒಳಗಾಗಿ ಕಳುಹಿಸಬೇಕು. ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ, ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಪುರಸ್ಕರಿಸಲಾಗುವುದು ಎಂದು ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!