ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಕಳೆದ ಎರಡು ವರ್ಷಗಳಿಂದ ಯೂಟ್ಯೂಬ್ ಚಾನೆಲ್ ಮೂಲಕ ಕಾರ್ಯನಿರ್ವಹಿಸುತ್ತಿದ್ದ “ಧ್ವನಿ ನ್ಯೂಸ್”ನ ವಿಸ್ತರಿಸಿದ ಭಾಗವಾಗಿ ಧ್ವನಿ ವೆಬ್ ಸೈಟ್ ಇಂದು ಲೋಕಾರ್ಪಣೆ ಗೊಂಡಿತು. ಬೆಳಾಲು ಶ್ರೀ ಆರಿಕೋಡಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ವೆಬ್ ಸೈಟ್ ಅನ್ನು ಲೋಕಾರ್ಪಣೆಗೊಳಿಸಿದರು.

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ದಿವ್ಯಾಶಿರ್ವಾದವನ್ನು ನೀಡಿದರು .
ಈ ಸಂದರ್ಭದಲ್ಲಿ ಧ್ವನಿ ನ್ಯೂಸ್ ಸಂಪಾದಕರಾದ ಸುದೀಪ್ ಸಾಲ್ಯಾನ್ ಸೇರಿದಂತೆ, ಸಂಸ್ಥೆಯ ಸಿಬ್ಬಂದಿ ವರ್ಗದವರಾದ ಸಂತೋಷ್ ಬೇಂಕ್ಯ, ಮನೀಷ್, ಕಿರಣ್, ಸುದರ್ಶನ್, ಲೋಹಿತ್, ಯೋಗೀಶ್ ಉಪಸ್ಥಿತರಿದ್ದರು.











