September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮದ್ದಡ್ಕ : ತಾಯಿ ರಕ್ತೇಶ್ವರಿ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

ಕುವೆಟ್ಟು: ಶತಮಾನಗಳಿಂತಲೂ ಹಿoದಿನ ಪ್ರಸಿದ್ಧ ಕಾರಣಿಕ‌ದ ದೈವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ನ .7 ರoದು ಶಿಲಾನ್ಯಾಸ ಕಾರ್ಯಕ್ರಮ ಅಸ್ರಣ್ಣರು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಇವರ ವೈದಿಕ ವಿಧಿ ವಿಧಾನಗಳೊಂದಿಗೆ ಜರಗಿತು.

ಕಾರ್ಯಕ್ರಮದಲ್ಲಿ ರಾಘವೇಂದ್ರ ಭಟ್ ಮಠ, ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಮೋಹನ್ ಕೆರ್ಮುಣ್ಣಾಯ ಮೈರಾರು, ಶ್ರೀನಿವಾಸ ಅಮ್ಮಣ್ಣಾಯ ಅಸ್ರಣ್ಣರು ಮೂಡುಮನೆ, ಮುಗ್ರೋಡಿ‌ ಕನ್ಸ್ಟಕ್ಷನ್ ಮಂಗಳೂರು ಇದರ ಮಾಲೀಕರಾದ ಸುಧಾಕರ್ ಶೆಟ್ಟಿ, ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ ಪ್ರಕೃತಿ ಮದ್ದಡ್ಕ , ಜೀವ ವಿಮಾ ಪ್ರತಿನಿಧಿ ಕೆ ರಮೇಶ್ ಪ್ರಥ್ವಿ ಗುರುವಾಯನಕೆರೆ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ, ಅಧ್ಯಕ್ಷ ಜೇಷ್ಠ ಪಡಿವಾಳ್, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು, ಉಪಾಧ್ಯಕ್ಷರಾದ ವಾಸುದೇವ ಪ್ರಭು ಕೆವುಡೇಲು, ಚಿದಾನoದ ಕಾಯೆರಡ್ಕ, ವಿಜಯ ಸಾಲ್ಯಾನ್ ಪಣಕಜೆ , ರುದೇಶ್ ಕುಮಾರ್ ಗಾಣದಕೊಟ್ಯಿ, ಅನೂಪ್ ಬoಗೇರ ಮದ್ದಡ್ಕ, ಕಾರ್ಯದರ್ಶಿ ಗೋಪಾಲ ಶೆಟ್ಟಿ ಕೋರ್ಯಾರು, ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು, ಜೊತೆ ಕಾರ್ಯದರ್ಶಿ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಗಣೇಶ್ ಶೆಟ್ಟಿ ಅರ್ಕಜೆ, ವಿನೋದ್ ಶೆಣೈ ಮದ್ದಡ್ಕ, ಕೇಶವ ಪೂಜಾರಿ ಸುದೆಬೈಲು ಹಾಗೂ ಹಿರಿಯರು ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜೇಷ್ಠ ಪಡಿವಾಳ್ ಪ್ರಾಥಮಿಕವಾಗಿ ಮಾತನಾಡಿ ಜೀರ್ಣೋದ್ಧಾರ ಕೆಲಸ ಕಾರ್ಯಗಳು ದಾನಿಗಳ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ನಡೆಯಲಿದೆ ಎoದು ಹೇಳಿದರು. ಪ್ರಭಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಾಜ್ ಪ್ರಕಾಶ್ ಪಡ್ಡೈಲು ಧನ್ಯವಾದ ನೀಡಿದರು.

Related posts

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya
error: Content is protected !!