September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

ಬೆಳ್ತಂಗಡಿ: ಹಿಂದೂ ಧರ್ಮದ ಪರವಾಗಿ ಸಮಾಜ ಪರಿವರ್ತನೆ ಕಾರ್ಯ ಮಾಡುತ್ತಿರುವ ಪ. ಪೂ. ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರ ಮೇಲೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆ ಪ್ರವೇಶ ನಿಷೇಧಿರಿಸುವುದು ಸಂಪೂರ್ಣವಾಗಿ ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆ ಆಗಿದ್ದು, ಧಾರ್ಮಿಕ ಸಹಿಷ್ಣುತೆಗೂ ಧಕ್ಕೆಯಾಗಿದ್ದು ರಾಜ್ಯಪಾಲರು ಈ ನಿಷೇಧದ ವಿಚಾರದಲ್ಲಿ ಸಂವಿಧಾನ ಪ್ರಕಾರ ಸೂಕ್ತ ತನಿಖೆ ನಡೆಸಿ ಈ ನಿಷೇಧವನ್ನು ತಕ್ಷಣ ರದ್ದುಪಡಿಸುವಂತೆ ಕೋರಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಲಾಯಿತು.

ಕಳೆದ ಶತಮಾನಗಳಿಂದ ರಾಷ್ಟ್ರದ ಸಂಕಷ್ಟದ ಸಂದರ್ಭಗಳಲ್ಲಿ ಸಂಘವು ನಿರಪೇಕ್ಷ ಸೇವೆ ಸಲ್ಲಿಸಿರುವುದು ರಾಷ್ಟ್ರಪ್ರೇಮದ ನಿದರ್ಶನವಾಗಿದೆ. ಇಂತಹ ಸಂಸ್ಥೆಯ ಮೇಲೆ ಕೋಮುವಾದ ದ್ವೇಷ ಅಥವಾ ಸಂವಿಧಾನ ಬಾಹಿರ ಕ್ರಿಯೆಗಳಲ್ಲಿ ತೊಡಗಿದೆ ಎಂಬ ಆರೋಪಗಳನ್ನು ರಾಜಕೀಯ ಉದ್ದೇಶಕ್ಕಾಗಿ ಮಾಡುವುದು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ದಂಡನೀಯ ಅಪರಾಧವಾಗಿದೆ. ಸರಕಾರವು ಕೂಡಲೆ ಸಂಘದ ವಿರುದ್ಧ ಸುಳ್ಳು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಅದೇ ರೀತಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವಾ ಸಂಸ್ಥೆಯಾಗಿದ್ದು, ಕೇಂದ್ರ ಸರಕಾರದ ಆಜ್ಞೆ ಪ್ರಕಾರ ಸರ್ಕಾರಿ ನೌಕರರು ಸಾಮಾಜಿಕ ಸಂಸ್ಥೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗಿಲ್ಲ. ಹೀಗಿರುವಾಗ ಸರಕಾರಿ ನೌಕರರು ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ ಕಾರಣಕ್ಕೆ ಅವರನ್ನು ಅಮಾನತು ಮಾಡಿರುವುದು ಅಧಿಕಾರದ ದುರ್ಬಳಕೆ ಹಾಗೂ ಸಂವಿಧಾನ ಬಾಹಿರ ಕ್ರಮವಾಗಿದೆ. ಆದ್ದರಿಂದ ಅವರ ಅಮಾನತು ಆದೇಶವನ್ನು ತಕ್ಷಣ ರದ್ದುಪಡಿಸಲು ಹಾಗೂ ಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮೂಲಕ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಮೇಶ ಬಂಗೇರ ಕಾರ್ಯದರ್ಶಿಗಳು ಮಹಮಾಯಿ ಭಜನಾ ಮಂದಿರ ಪಿಲ್ಯ, ಯೋಗೀಶ್, ನಿಕಟ ಪೂರ್ವ ಅಧ್ಯಕ್ಷರು ಕೊಕ್ಕಡ ಪಂಚಾಯತ್, ರಾಮನಾಥ ಮದಡ್ಕ, ಕೇಶವ ಅಚ್ಚಿನಡ್ಕ, ತಾರಾನಾಥ್ ಕಳೆಂಜ, ಯೋಗೀಶ್ ಕೆಂಬರ್ಜೆ ಹಾಗೂ ಹರೀಶ್ ಮುದ್ದಿನಡ್ಕ ಮುಂತಾದವರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!