September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ 2025-26 ನೇ ಸಾಲಿನ ಪ್ರಥಮ ಹಂತದ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಯಿತು.

ಎಸ್ ಡಿ ಎಂ ಸಿ ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ಸುನಂದಾ ,ಪಂಚಾಯತ್ ಸದಸ್ಯರಾದ ಗಣೇಶ್ ಗೌಡ ಹಾಗೂ ಶ್ರೀಮತಿ ವೇದಾವತಿ, ಮುಖ್ಯಶಿಕ್ಷಕ ರಾಜೇಂದ್ರ ಭಟ್, ಪೋಷಕ ಪ್ರತಿನಿಧಿ ಕೃಷ್ಣಪ್ಪ ಹಾಗೂ ಹಿರಿಯ ಶಿಕ್ಷಕಿ ಶ್ರೀಮತಿ ಪುಷ್ಪ ಉಪಸ್ಥಿತರಿದ್ದರು.

ಶ್ರೀಮತಿ ನಿಖಿಲಾ ಸ್ವಾಗತಿಸಿದರು.ಮುಖ್ಯ ಶಿಕ್ಷಕರಾದ ರಾಜೇಂದ್ರ ಭಟ್ ಪ್ರಸ್ತಾವಿಕ ನುಡಿಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮದ ಉದ್ದೇಶ ಮತ್ತು ಮಕ್ಕಳ ಪ್ರಗತಿ, ಶಾಲೆಯ ಅಗತ್ಯ ಬೇಡಿಕೆ ಗಳ ಬಗ್ಗೆ ತಿಳಿಸಿದರು. ಬಳಿಕ 2024 -2025 ನೆಯ ಸಾಲಿನಲ್ಲಿ ಕಲಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿಯಿಂದ ಅಭಿನಂದಿಸಲಾಯಿತು.

ಈ ಕಾರ್ಯಕ್ರಮವನ್ನು ಶ್ರೀಮತಿ ಭವ್ಯ ರವರು ನಿರ್ವಹಣೆ ಮಾಡಿದರು. ಬಳಿಕ ವಲಯಮಟ್ಟದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳನ್ನು ಗೌರವಿಸಲಾಯಿತು. ಈ ಕಾರ್ಯಕ್ರಮವನ್ನು ಶ್ರೀಮತಿ ಜಯಶ್ರೀ ನಿರ್ವಹಣೆ ಮಾಡಿದರು. ನಂತರ ನಶಾ ಮುಕ್ತ ಭಾರತ ಅಭಿಯಾನದ ಅಡಿಯಲ್ಲಿ ಗ್ರಾಮಪಂಚಾಯತ್ ವತಿಯಿಂದ ನಡೆಸಲಾದ ಚಿತ್ರಕಲೆ, ರಂಗೋಲಿ, ಪ್ರಬಂಧ ರಚನೆ,ಘೋಷವಾಕ್ಯ ರಚನೆ ಈ ಸ್ಪರ್ಧೆಗಳ ವಿಜೇತರನ್ನು ಗ್ರಾಮಪಂಚಾಯತ್ ವತಿಯಿಂದ ಗೌರವಿಸಲಾಯಿತು.

ಶಿಕ್ಷಕಿ ಶ್ರೀಮತಿ ವಿನೋದ ಮಕ್ಕಳ ಕಲಿಕೆಯ ಮೇಲೆ ಆರೋಗ್ಯ ಆಹಾರಕ್ರಮ, ಸಂಸ್ಕಾರ ಬೆಳೆಸುವಲ್ಲಿ ಪೋಷಕರ ಪಾತ್ರ ಎಷ್ಟು ಮುಖ್ಯ ಎಂಬ ಬಗ್ಗೆ ಅರಿವು ಮೂಡಿಸಿದರು. ಮುಖ್ಯ ಅತಿಥಿ ಶ್ರೀಮತಿ ಸುನಂದಾ ಎಸ್ ಎಸ್ ಎಲ್ ಸಿ ಯಲ್ಲಿ 4ನೆಯ ಭಾರಿಯು 100% ಫಲಿತಾಂಶ ಸಾಧಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು. ಪಂಚಾಯತ್ ಸದಸ್ಯರಾದ ಗಣೇಶ್ ಗೌಡ ಇವರು ಹೆಚ್ಚುತ್ತಿರುವ ರಸ್ತೆ ಅಪಘಾತವನ್ನು ತಡೆಗಟ್ಟುವಲ್ಲಿ ಪೋಷಕರ ಪಾತ್ರ ಹಾಗೂ ಜವಾಬ್ದಾರಿ ಎಷ್ಟು ಮುಖ್ಯ ಎಂಬುದಾಗಿ ಮನವರಿಕೆ ಮಾಡಿದರು. ಅಲ್ಲದೆ ಶೇ.100 ಫಲಿತಾಂಶ ಸಾಧನೆಯಾದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಪ್ರೋತ್ಸಾಹ ನೀಡುವುದಾಗಿ ಹೇಳುವ ಮೂಲಕ ಮಕ್ಕಳನ್ನು ಹುರಿದುಂಬಿಸಿದರು. ಬಳಿಕ ಪೋಷಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷರು ಉಮೇಶ್ ಪ್ರಭು ಹಡೀಲ್ ರವರು ವಿಶೇಷವಾಗಿ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳ ಪೋಷಕರಿಗೆ ಮಕ್ಕಳ ಬಗ್ಗೆ ವಿಶೇಷ ಗಮನಹರಿಸುವಂತೆ ಸೂಚಿಸಿದರು. ನಂತರ ಪೋಷಕರು ತಮ್ಮ ಮಕ್ಕಳ ಉತ್ತರ ಪತ್ರಿಕೆಗಳನ್ನ ನೋಡಿ ತರಗತಿ ಶಿಕ್ಷಕರ ಜೊತೆ ಚರ್ಚಿಸಿದರು. ಶ್ರೀಮತಿ ಮೀನ ಕಾರ್ಯಕ್ರಮ ನಿರೂಪಿಸಿ. ಶ್ರೀಮತಿ ಪುಷ್ಪ ಧನ್ಯವಾದವಿತ್ತರು.

Related posts

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya
error: Content is protected !!