24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಕ್ಲಬ್ ಸ್ಥಾಪಕ ಸದಸ್ಯ, ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಸೇವೆ ನೀಡಿದ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ ಸಭೆ ಬೆಳ್ತಂಗಡಿಯಲ್ಲಿ ನಡೆಯಿತು.

ಮಾಜಿ ಲಯನ್ಸ್ ಜಿಲ್ಲಾ ರಾಜ್ಯಪಾಲರಾದ ಲಯನ್ ವಸಂತ ಕುಮಾರ್ ಶೆಟ್ಟಿಯವರು ಎಂ. ಜಿ. ಶೆಟ್ಟಿಯವರ ಕಾರ್ಯವೈಖರಿ, ದಿಟ್ಟತನ, ನಾಯಕತ್ವ ಗುಣ, ಜೀವ ವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ನೀಡಿದ ಬಗ್ಗೆ ನುಡಿ ನಮನದಲ್ಲಿ ವಿವರಿಸಿದರು. ಬೆಳ್ತಂಗಡಿ ಲಯನ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ, ಪ್ರಾಂತೀಯ ಅಧ್ಯಕ್ಷ ಜಗದೀಶ್ಚಂದ್ರ ಡಿ. ಕೆ., ನಿಕಟಪೂರ್ವ ಅಧ್ಯಕ್ಷ ದೇವದಾಸ್ ಎಲ್. ಶೆಟ್ಟಿ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಕೋಶಾಧಿಕಾರಿ ಸುಭಾಷಿಣಿ, ಲಿಯೋ ಅಧ್ಯಕ್ಷೆ ಡಾ. ಭಾಷಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಾಜಿ ಪ್ರಾಂತೀಯ ಅಧ್ಯಕ್ಷರುಗಳಾದ ವೆಂಕಟೇಶ್ ಹೆಬ್ಬಾರ್, ರಾಜು ಶೆಟ್ಟಿ, ನಿತ್ಯಾನಂದ ನಾವರ, ಪ್ರಕಾಶ್ ಶೆಟ್ಟಿ ನೊಚ್ಚ, ಧರಣೇಂದ್ರ.ಕೆ. ಜೈನ್, ಸ್ಥಾಪಕ ಸದಸ್ಯ ವಿಶ್ವನಾಥ್ ಆರ್. ನಾಯಕ್, ಮಾಜಿ ಅಧ್ಯಕ್ಷರುಗಳಾದ ರಾಮಕೃಷ್ಣ ಗೌಡ, ಉಮೇಶ್ ಶೆಟ್ಟಿ ಮುಂತಾದವರು ನುಡಿ ನಮನ ಸಲ್ಲಿಸಿದರು. ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ದಾ ನುಡಿನಮನ ಸಭೆಯನ್ನು ನಿರ್ವಹಿಸಿದರು. ಎಂ. ಜಿ. ಶೆಟ್ಟಿಯವರ ಕುಟುಂಬ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು. ಮಾಜಿ ಅಧ್ಯಕ್ಷರುಗಳಾದ ಸುಶೀಲ ಹೆಗ್ಡೆ, ಜಯಂತ್ ಶೆಟ್ಟಿ ಕುಂಟಿನಿ, ರವೀಂದ್ರ ಶೆಟ್ಟಿ ಬಳಂಜ ಲಯನ್ಸ್ ಸದಸ್ಯರುಗಳಾದ ಪ್ರತಿಭಾ ಹೆಬ್ಬಾರ್, ಎ. ಕೆ. ಶಿವನ್, ಪದ್ಮನಾಭ ಟಿ, ಕೃಷ್ಣ ಕೆ. ಆಚಾರ್, ಸುರೇಶ ಶೆಟ್ಟಿ ಲಾಯಿಲ, ವಿನ್ಸಿ ಟಿ. ಡಿಸೋಜ, ಮಂಜುನಾಥ್ ಜಿ., ತಂಗಚ್ಚನ್, ಸುಂದರಿ, ಗೋಪಾಲಕೃಷ್ಣ ಕಾಂಚೋಡು, ರಮೇಶ್, ತುಕಾರಾಮ್ ಬಿ., ರೀನಾ ಕೆ. ಜೆ., ಚಂದ್ರಶೇಖರ್ ಶೆಟ್ಟಿ ಕಿರಣ್ ಕುಮಾರ್ ಅನಂತ ಕೃಷ್ಣ ದತ್ತಾತ್ರೇಯ ಗೊಲ್ಲ ಸಭೆಯಲ್ಲಿ ಉಪಸ್ಥಿತರಿದ್ದರು. ಜತೆ ಕಾರ್ಯದರ್ಶಿ ನಾಣ್ಯಪ್ಪ ನಾಯ್ಕ್ ಉಪಸ್ಥಿತರಿದ್ದರು.

Related posts

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!