July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

ಬೆಳ್ತಂಗಡಿ: ಹಿಂದೂ ಧರ್ಮದ ಪರವಾಗಿ ಸಮಾಜ ಪರಿವರ್ತನೆ ಕಾರ್ಯ ಮಾಡುತ್ತಿರುವ ಪ. ಪೂ. ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರ ಮೇಲೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆ ಪ್ರವೇಶ ನಿಷೇಧಿರಿಸುವುದು ಸಂಪೂರ್ಣವಾಗಿ ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆ ಆಗಿದ್ದು, ಧಾರ್ಮಿಕ ಸಹಿಷ್ಣುತೆಗೂ ಧಕ್ಕೆಯಾಗಿದ್ದು ರಾಜ್ಯಪಾಲರು ಈ ನಿಷೇಧದ ವಿಚಾರದಲ್ಲಿ ಸಂವಿಧಾನ ಪ್ರಕಾರ ಸೂಕ್ತ ತನಿಖೆ ನಡೆಸಿ ಈ ನಿಷೇಧವನ್ನು ತಕ್ಷಣ ರದ್ದುಪಡಿಸುವಂತೆ ಕೋರಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಲಾಯಿತು.

ಕಳೆದ ಶತಮಾನಗಳಿಂದ ರಾಷ್ಟ್ರದ ಸಂಕಷ್ಟದ ಸಂದರ್ಭಗಳಲ್ಲಿ ಸಂಘವು ನಿರಪೇಕ್ಷ ಸೇವೆ ಸಲ್ಲಿಸಿರುವುದು ರಾಷ್ಟ್ರಪ್ರೇಮದ ನಿದರ್ಶನವಾಗಿದೆ. ಇಂತಹ ಸಂಸ್ಥೆಯ ಮೇಲೆ ಕೋಮುವಾದ ದ್ವೇಷ ಅಥವಾ ಸಂವಿಧಾನ ಬಾಹಿರ ಕ್ರಿಯೆಗಳಲ್ಲಿ ತೊಡಗಿದೆ ಎಂಬ ಆರೋಪಗಳನ್ನು ರಾಜಕೀಯ ಉದ್ದೇಶಕ್ಕಾಗಿ ಮಾಡುವುದು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ದಂಡನೀಯ ಅಪರಾಧವಾಗಿದೆ. ಸರಕಾರವು ಕೂಡಲೆ ಸಂಘದ ವಿರುದ್ಧ ಸುಳ್ಳು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಅದೇ ರೀತಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವಾ ಸಂಸ್ಥೆಯಾಗಿದ್ದು, ಕೇಂದ್ರ ಸರಕಾರದ ಆಜ್ಞೆ ಪ್ರಕಾರ ಸರ್ಕಾರಿ ನೌಕರರು ಸಾಮಾಜಿಕ ಸಂಸ್ಥೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗಿಲ್ಲ. ಹೀಗಿರುವಾಗ ಸರಕಾರಿ ನೌಕರರು ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ ಕಾರಣಕ್ಕೆ ಅವರನ್ನು ಅಮಾನತು ಮಾಡಿರುವುದು ಅಧಿಕಾರದ ದುರ್ಬಳಕೆ ಹಾಗೂ ಸಂವಿಧಾನ ಬಾಹಿರ ಕ್ರಮವಾಗಿದೆ. ಆದ್ದರಿಂದ ಅವರ ಅಮಾನತು ಆದೇಶವನ್ನು ತಕ್ಷಣ ರದ್ದುಪಡಿಸಲು ಹಾಗೂ ಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮೂಲಕ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಮೇಶ ಬಂಗೇರ ಕಾರ್ಯದರ್ಶಿಗಳು ಮಹಮಾಯಿ ಭಜನಾ ಮಂದಿರ ಪಿಲ್ಯ, ಯೋಗೀಶ್, ನಿಕಟ ಪೂರ್ವ ಅಧ್ಯಕ್ಷರು ಕೊಕ್ಕಡ ಪಂಚಾಯತ್, ರಾಮನಾಥ ಮದಡ್ಕ, ಕೇಶವ ಅಚ್ಚಿನಡ್ಕ, ತಾರಾನಾಥ್ ಕಳೆಂಜ, ಯೋಗೀಶ್ ಕೆಂಬರ್ಜೆ ಹಾಗೂ ಹರೀಶ್ ಮುದ್ದಿನಡ್ಕ ಮುಂತಾದವರು ಉಪಸ್ಥಿತರಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya
error: Content is protected !!