23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

ಉಜಿರೆ: ಒಂದು ಕಾಲಕ್ಕೆ ಸಂಸ್ಕೃತ ಭಾಷೆಯು ಜನ ಸಾಮಾನ್ಯರ ಆಡುಭಾಷೆ ಆಗಿತ್ತು. ಈ ಕಾರಣಕ್ಕಾಗಿಯೇ ರಾಮಾಯಣ , ಮಹಾಭಾರತ ಇತ್ಯಾದಿ ಕಾವ್ಯಾದಿಗಳು ರಚನೆಯಾಗಿದ್ದವು. ಇಂತಹ ಕಾವ್ಯಗಳನ್ನು ಪ್ರೀತಿ ಇಟ್ಟು ಓದಿದರೆ ಹಾಗೂ ಆಸಕ್ತಿ ಹುಟ್ಟಿಸಿಕೊಂಡರೆ ಕಾವ್ಯಗಳನ್ನು ಹೆಚ್ಚು ಅರ್ಥೈಸಲು ಸಾಧ್ಯ. ರಾಮನ ಕಥೆಯನ್ನು ವಾಲ್ಮೀಕಿ ಕವಿಗಳು ರಾಮಾಯಣದಲ್ಲಿ ತುಂಬಾ ಚೆನ್ನಾಗಿ ಚಿತ್ರಿಸಿದ್ದಾರೆ. ರಾಮನ ಹಾಗೂ ರಾಮಾಯಣದ ಧನಾತ್ಮಕ ಅಂಶಗಳನ್ನು ಹೆಚ್ಚಾಗಿ ಸಮಾಜಕ್ಕೆ ತಲುಪಿಸಬೇಕು. ರಾಮನ ಆದರ್ಶ ಜೀವನ ಎಲ್ಲರಿಗೂ ಸ್ಫೂರ್ತಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಶ್ರೇಯಸ್ ಪಾಳಂದೆ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ನಡೆದ ವಂದೇ ವಾಲ್ಮೀಕಿ ಕೋಕಿಲಮ್ ಎನ್ನುವ ವಾಲ್ಮೀಕಿ ಸ್ಮರಣಾ ಎನ್ನುವ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಸಮೃದ್ಧಿ ಸ್ವಾಗತಿಸಿ , ತನ್ಮಯಿ ವಂದಿಸಿದರು . ಶಾಂಭವಿ ನಿರೂಪಿಸಿದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಗೋವಿಂದೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!