September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಉಜಿರೆ: ನಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ಆಹಾರ ಮತ್ತು ನೀರನ್ನು ಸೇವಿಸಬೇಕು. ಕಾಲಕ್ಕೆ ತಕ್ಕಂತೆ ನಮ್ಮ ಆಹಾರ ಕ್ರಮಗಳಲ್ಲಿಯೂ ಬದಲಾವಣೆ ಮಾಡಿಕೊಳ್ಳಬೇಕು. ಆಹಾರಾದಿಗಳನ್ನು ಎಷ್ಟು ತಿನ್ನುತ್ತೇವೆ ಎನ್ನುವುದು ಮುಖ್ಯವಲ್ಲ ಹೇಗೆ ತಿನ್ನುತ್ತೇವೆ ಎನ್ನುವುದು ಮುಖ್ಯ. ದೈಹಿಕ , ಮಾನಸಿಕ ಹಾಗೂ ಆಧ್ಯಾತ್ಮಿಕ ವ್ಯಕ್ತಿತ್ವಕ್ಕೂ ಆಹಾರ ಪ್ರಭಾವ ಬೀರುತ್ತದೆ. ಯಾವಾಗಲೂ ಸತ್ತ್ವಭರಿತ ಆಹಾರಗಳನ್ನು ಆದಷ್ಟು ಸೇವಿಸಬೇಕು. ಮಿತವಾದ , ಶುಚಿಯಾದ ಆಹಾರ ಕ್ರಮ ಯಾವಾಗಲೂ ಉತ್ತಮ. ಒಟ್ಟಾರೆ ಆಹಾರವೇ ಔಷಧವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಭಾಷಿಣಿ ಧರ್ಮಸ್ಥಳ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವತಿಯಿಂದ ನಡೆದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.
ದೀಕ್ಷಾ ಸ್ವಾಗತಿಸಿ , ಐಶ್ವರ್ಯಾ ಪಿ ಶೆಟ್ಟಿ ಪರಿಚಯಿಸಿದರು. ಅಹಲ್ಯಾ ಬೆಂಡೆ ನಿರೂಪಿಸಿ , ಅನುಜ್ಞಾ ರಾವ್ ವಂದಿಸಿದರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ : ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya

ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಮರ ಬಿದ್ದು ಕಾರಿಗೆ ಹಾನಿ

Suddi Udaya
error: Content is protected !!