23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಉಜಿರೆ: ನಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ಆಹಾರ ಮತ್ತು ನೀರನ್ನು ಸೇವಿಸಬೇಕು. ಕಾಲಕ್ಕೆ ತಕ್ಕಂತೆ ನಮ್ಮ ಆಹಾರ ಕ್ರಮಗಳಲ್ಲಿಯೂ ಬದಲಾವಣೆ ಮಾಡಿಕೊಳ್ಳಬೇಕು. ಆಹಾರಾದಿಗಳನ್ನು ಎಷ್ಟು ತಿನ್ನುತ್ತೇವೆ ಎನ್ನುವುದು ಮುಖ್ಯವಲ್ಲ ಹೇಗೆ ತಿನ್ನುತ್ತೇವೆ ಎನ್ನುವುದು ಮುಖ್ಯ. ದೈಹಿಕ , ಮಾನಸಿಕ ಹಾಗೂ ಆಧ್ಯಾತ್ಮಿಕ ವ್ಯಕ್ತಿತ್ವಕ್ಕೂ ಆಹಾರ ಪ್ರಭಾವ ಬೀರುತ್ತದೆ. ಯಾವಾಗಲೂ ಸತ್ತ್ವಭರಿತ ಆಹಾರಗಳನ್ನು ಆದಷ್ಟು ಸೇವಿಸಬೇಕು. ಮಿತವಾದ , ಶುಚಿಯಾದ ಆಹಾರ ಕ್ರಮ ಯಾವಾಗಲೂ ಉತ್ತಮ. ಒಟ್ಟಾರೆ ಆಹಾರವೇ ಔಷಧವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಭಾಷಿಣಿ ಧರ್ಮಸ್ಥಳ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವತಿಯಿಂದ ನಡೆದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.
ದೀಕ್ಷಾ ಸ್ವಾಗತಿಸಿ , ಐಶ್ವರ್ಯಾ ಪಿ ಶೆಟ್ಟಿ ಪರಿಚಯಿಸಿದರು. ಅಹಲ್ಯಾ ಬೆಂಡೆ ನಿರೂಪಿಸಿ , ಅನುಜ್ಞಾ ರಾವ್ ವಂದಿಸಿದರು.

Related posts

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya
error: Content is protected !!