23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋವಧೆಯ ಹೆಸರಿನಲ್ಲಿ ಅಕ್ರಮವಾಗಿ ಅಮಾಯಕ ಮಹಿಳೆ ಝೊಹರಾ ಅವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗ ನ.8ರಂದು ಭೇಟಿ ಮಾಡಿ ಮಾತುಕತೆ ನಡೆಸಿದರು.

ಘಟನೆಯ ವಿವರ ಪಡೆದ ನಿಯೋಗ, ಈ‌ ಬಗ್ಗೆ ನಾವು ಪೊಲೀಸ್ ಮೇಲಧಿಕಾರಿಗಳ ಜೊತೆ ಮಾತುಕತೆ ಮಾಡಿ ಇಂತಹಾ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವ ಬಗ್ಗೆ ನಿಯೋಗ ಭೇಟಿ ನೀಡುವ ಬಗ್ಗೆ ಆದ ಮಿರ್ಣಯಗಳನ್ನು ತಿಳಿಸಲಾಯಿತು. ಹಾಗೂ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಲಾಯಿತು.
ಪುತ್ತೂರು‌ ಸಹಾಯಕ ಆಯುಕ್ತರ ಆದೇಶದಂತೆ ಮನೆ ಜಪ್ತಿ‌ ತೆರವಿಗೆ ಬಂದ ಪೊಲೀಸ್ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಲಾಯಿತು.

ನಿಯೋಗದಲ್ಲಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಸಲೀಂ ಗುರುವಾಯನಕೆರೆ, ಕೆರೀಂ ಗೇರುಕಟ್ಟೆ, ಕೆ.ಎಸ್ ಅಬ್ದುಲ್ಲ ಕರಾಯ, ಲೆತೀಫ್ ಹಾಜಿ ಗುರುವಾಯನಕೆರೆ, ಮುಸ್ತಫ ಗುರುವಾಯನಕೆರೆ, ನಿಸಾರ್ ಕುದ್ರಡ್ಕ, ರಮೀಝ್ ಬೆಳ್ತಂಗಡಿ, ಉಮರ್ ಜಿ.ಕೆ, ಶಮೀಮ್ ಯೂಸುಫ್ ಮದ್ದಡ್ಕ, ಆಶ್ರಫ್ ಆಲಿಕುಂಞಿ ಮುಂಡಾಜೆ, ಹನೀಫ್ ಪುಂಜಾಲಕಟ್ಟೆ, ಅಬ್ದುಲ್ ರಹಿಮಾನ್ ಪಡ್ಪು, ಸಾಲಿಹ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಅಳದಂಗಡಿ ಸಂತ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!