March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಇಲ್ಲಿನ ಜನರಲ್ಲಿ ಆತಂಕದ ವಾತಾವರಣ ಉಂಟಾಗಿದೆ.

ಕಳೆದ ಹಲವು ದಿನಗಳಿಂದ ಇಲ್ಲಿನ ಒಂದಲ್ಲ ಒಂದು ಭಾಗದಲ್ಲಿ ಕಾಡಾನೆಗಳ ಹಿಂಡು ಕಂಡುಬರುತ್ತಿದೆ. ಸ್ಥಳೀಯರ ಪ್ರಕಾರ ಇಲ್ಲಿ ಎರಡು ಮರಿಯಾನೆ ಸಹಿತ 13 ಆನೆಗಳು ಓಡಾಡುತ್ತಿವೆ. ಕೃಷಿ ನಾಶದ ಜತೆಗೆ ಜನನಿಬಿಡ ಪ್ರದೇಶಗಳವರೆಗೂ ಕಾಡಾನೆಗಳು ಲಗ್ಗೆ ಇಡುತ್ತಿರುವುದು ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.

ನ.7ರಂದು ಸಂಜೆ 6:30 ಸಮಯ ಇಲ್ಲಿನ ಮಲೆಜೋಡಿ ಎಂಬಲ್ಲಿ ಒಂದು ಮರಿಯಾನೆ ಸಹಿತ ಎಂಟು ಕಾಡಾನೆಗಳು ಕಂಡು ಬಂದಿದೆ. ಇಲ್ಲಿಂದ ಮುಂದುವರಿದ ಹಿಂಡು ಕೋಡಿ,ಅಮೈ,ಕೂಡಾಲ,ಬೆಡಿಗುತ್ತು ಪರಿಸರಗಳಲ್ಲಿ ಓಡಾಟ ನಡೆಸಿದೆ.
ಅರಣ್ಯ ಇಲಾಖೆ ಮತ್ತು ಸ್ಥಳೀಯರು ಸೇರಿ ಕಾಡಾನೆಗಳನ್ನು ಓಡಿಸಿದ ಕಾರಣ ಹೆಚ್ಚಿನ ಕೃಷಿಹಾನಿ ಸಂಭವಿಸಿಲ್ಲ. ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಗ್ರಾಮಗಳು ಒಂದಕ್ಕೊಂದು ಹತ್ತಿರವಿದ್ದು ಇಲ್ಲೆಲ್ಲ ಈ ಕಾಡಾನೆಗಳ ಹಿಂಡು ಸಂಚಾರ ನಡೆಸುತ್ತಿದೆ.
ಮಿತ್ತಬಾಗಿಲು ಗ್ರಾಪಂನಿಂದ ಸ್ಥಳೀಯರಿಗೆ ಅರಣ್ಯ ಪ್ರದೇಶಗಳಲ್ಲಿ ಓಡಾಡದಂತೆ ಈಗಾಗಲೇ ಎಚ್ಚರಿಕೆ ನೀಡಿದ್ದು ಹಗಲಿನ ಹೊತ್ತು ಮುಂಜಾಗ್ರತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಈ ಗ್ರಾಮಗಳಲ್ಲಿ ಕಳೆದ 15 ವರ್ಷಗಳಿಂದ ಕಾಡಾನೆಗಳ ಕಾಟವಿದ್ದು ಇತ್ತೀಚಿನ ದಿನಗಳಲ್ಲಿ ಇದು ವಿಪರೀತವಾಗಿ ಸಾಕಷ್ಟು ಕೃಷಿ ಹಾನಿ ಜತೆಗೆ ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ ಕಾಡಾನೆಗಳ ಕಾಟಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya
error: Content is protected !!