September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಇಲ್ಲಿನ ಜನರಲ್ಲಿ ಆತಂಕದ ವಾತಾವರಣ ಉಂಟಾಗಿದೆ.

ಕಳೆದ ಹಲವು ದಿನಗಳಿಂದ ಇಲ್ಲಿನ ಒಂದಲ್ಲ ಒಂದು ಭಾಗದಲ್ಲಿ ಕಾಡಾನೆಗಳ ಹಿಂಡು ಕಂಡುಬರುತ್ತಿದೆ. ಸ್ಥಳೀಯರ ಪ್ರಕಾರ ಇಲ್ಲಿ ಎರಡು ಮರಿಯಾನೆ ಸಹಿತ 13 ಆನೆಗಳು ಓಡಾಡುತ್ತಿವೆ. ಕೃಷಿ ನಾಶದ ಜತೆಗೆ ಜನನಿಬಿಡ ಪ್ರದೇಶಗಳವರೆಗೂ ಕಾಡಾನೆಗಳು ಲಗ್ಗೆ ಇಡುತ್ತಿರುವುದು ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.

ನ.7ರಂದು ಸಂಜೆ 6:30 ಸಮಯ ಇಲ್ಲಿನ ಮಲೆಜೋಡಿ ಎಂಬಲ್ಲಿ ಒಂದು ಮರಿಯಾನೆ ಸಹಿತ ಎಂಟು ಕಾಡಾನೆಗಳು ಕಂಡು ಬಂದಿದೆ. ಇಲ್ಲಿಂದ ಮುಂದುವರಿದ ಹಿಂಡು ಕೋಡಿ,ಅಮೈ,ಕೂಡಾಲ,ಬೆಡಿಗುತ್ತು ಪರಿಸರಗಳಲ್ಲಿ ಓಡಾಟ ನಡೆಸಿದೆ.
ಅರಣ್ಯ ಇಲಾಖೆ ಮತ್ತು ಸ್ಥಳೀಯರು ಸೇರಿ ಕಾಡಾನೆಗಳನ್ನು ಓಡಿಸಿದ ಕಾರಣ ಹೆಚ್ಚಿನ ಕೃಷಿಹಾನಿ ಸಂಭವಿಸಿಲ್ಲ. ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಗ್ರಾಮಗಳು ಒಂದಕ್ಕೊಂದು ಹತ್ತಿರವಿದ್ದು ಇಲ್ಲೆಲ್ಲ ಈ ಕಾಡಾನೆಗಳ ಹಿಂಡು ಸಂಚಾರ ನಡೆಸುತ್ತಿದೆ.
ಮಿತ್ತಬಾಗಿಲು ಗ್ರಾಪಂನಿಂದ ಸ್ಥಳೀಯರಿಗೆ ಅರಣ್ಯ ಪ್ರದೇಶಗಳಲ್ಲಿ ಓಡಾಡದಂತೆ ಈಗಾಗಲೇ ಎಚ್ಚರಿಕೆ ನೀಡಿದ್ದು ಹಗಲಿನ ಹೊತ್ತು ಮುಂಜಾಗ್ರತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಈ ಗ್ರಾಮಗಳಲ್ಲಿ ಕಳೆದ 15 ವರ್ಷಗಳಿಂದ ಕಾಡಾನೆಗಳ ಕಾಟವಿದ್ದು ಇತ್ತೀಚಿನ ದಿನಗಳಲ್ಲಿ ಇದು ವಿಪರೀತವಾಗಿ ಸಾಕಷ್ಟು ಕೃಷಿ ಹಾನಿ ಜತೆಗೆ ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ ಕಾಡಾನೆಗಳ ಕಾಟಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya
error: Content is protected !!