23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಇಲ್ಲಿನ ಜನರಲ್ಲಿ ಆತಂಕದ ವಾತಾವರಣ ಉಂಟಾಗಿದೆ.

ಕಳೆದ ಹಲವು ದಿನಗಳಿಂದ ಇಲ್ಲಿನ ಒಂದಲ್ಲ ಒಂದು ಭಾಗದಲ್ಲಿ ಕಾಡಾನೆಗಳ ಹಿಂಡು ಕಂಡುಬರುತ್ತಿದೆ. ಸ್ಥಳೀಯರ ಪ್ರಕಾರ ಇಲ್ಲಿ ಎರಡು ಮರಿಯಾನೆ ಸಹಿತ 13 ಆನೆಗಳು ಓಡಾಡುತ್ತಿವೆ. ಕೃಷಿ ನಾಶದ ಜತೆಗೆ ಜನನಿಬಿಡ ಪ್ರದೇಶಗಳವರೆಗೂ ಕಾಡಾನೆಗಳು ಲಗ್ಗೆ ಇಡುತ್ತಿರುವುದು ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.

ನ.7ರಂದು ಸಂಜೆ 6:30 ಸಮಯ ಇಲ್ಲಿನ ಮಲೆಜೋಡಿ ಎಂಬಲ್ಲಿ ಒಂದು ಮರಿಯಾನೆ ಸಹಿತ ಎಂಟು ಕಾಡಾನೆಗಳು ಕಂಡು ಬಂದಿದೆ. ಇಲ್ಲಿಂದ ಮುಂದುವರಿದ ಹಿಂಡು ಕೋಡಿ,ಅಮೈ,ಕೂಡಾಲ,ಬೆಡಿಗುತ್ತು ಪರಿಸರಗಳಲ್ಲಿ ಓಡಾಟ ನಡೆಸಿದೆ.
ಅರಣ್ಯ ಇಲಾಖೆ ಮತ್ತು ಸ್ಥಳೀಯರು ಸೇರಿ ಕಾಡಾನೆಗಳನ್ನು ಓಡಿಸಿದ ಕಾರಣ ಹೆಚ್ಚಿನ ಕೃಷಿಹಾನಿ ಸಂಭವಿಸಿಲ್ಲ. ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಗ್ರಾಮಗಳು ಒಂದಕ್ಕೊಂದು ಹತ್ತಿರವಿದ್ದು ಇಲ್ಲೆಲ್ಲ ಈ ಕಾಡಾನೆಗಳ ಹಿಂಡು ಸಂಚಾರ ನಡೆಸುತ್ತಿದೆ.
ಮಿತ್ತಬಾಗಿಲು ಗ್ರಾಪಂನಿಂದ ಸ್ಥಳೀಯರಿಗೆ ಅರಣ್ಯ ಪ್ರದೇಶಗಳಲ್ಲಿ ಓಡಾಡದಂತೆ ಈಗಾಗಲೇ ಎಚ್ಚರಿಕೆ ನೀಡಿದ್ದು ಹಗಲಿನ ಹೊತ್ತು ಮುಂಜಾಗ್ರತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಈ ಗ್ರಾಮಗಳಲ್ಲಿ ಕಳೆದ 15 ವರ್ಷಗಳಿಂದ ಕಾಡಾನೆಗಳ ಕಾಟವಿದ್ದು ಇತ್ತೀಚಿನ ದಿನಗಳಲ್ಲಿ ಇದು ವಿಪರೀತವಾಗಿ ಸಾಕಷ್ಟು ಕೃಷಿ ಹಾನಿ ಜತೆಗೆ ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ ಕಾಡಾನೆಗಳ ಕಾಟಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya
error: Content is protected !!