23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಇಲ್ಲಿನ ಜನರಲ್ಲಿ ಆತಂಕದ ವಾತಾವರಣ ಉಂಟಾಗಿದೆ.

ಕಳೆದ ಹಲವು ದಿನಗಳಿಂದ ಇಲ್ಲಿನ ಒಂದಲ್ಲ ಒಂದು ಭಾಗದಲ್ಲಿ ಕಾಡಾನೆಗಳ ಹಿಂಡು ಕಂಡುಬರುತ್ತಿದೆ. ಸ್ಥಳೀಯರ ಪ್ರಕಾರ ಇಲ್ಲಿ ಎರಡು ಮರಿಯಾನೆ ಸಹಿತ 13 ಆನೆಗಳು ಓಡಾಡುತ್ತಿವೆ. ಕೃಷಿ ನಾಶದ ಜತೆಗೆ ಜನನಿಬಿಡ ಪ್ರದೇಶಗಳವರೆಗೂ ಕಾಡಾನೆಗಳು ಲಗ್ಗೆ ಇಡುತ್ತಿರುವುದು ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.

ನ.7ರಂದು ಸಂಜೆ 6:30 ಸಮಯ ಇಲ್ಲಿನ ಮಲೆಜೋಡಿ ಎಂಬಲ್ಲಿ ಒಂದು ಮರಿಯಾನೆ ಸಹಿತ ಎಂಟು ಕಾಡಾನೆಗಳು ಕಂಡು ಬಂದಿದೆ. ಇಲ್ಲಿಂದ ಮುಂದುವರಿದ ಹಿಂಡು ಕೋಡಿ,ಅಮೈ,ಕೂಡಾಲ,ಬೆಡಿಗುತ್ತು ಪರಿಸರಗಳಲ್ಲಿ ಓಡಾಟ ನಡೆಸಿದೆ.
ಅರಣ್ಯ ಇಲಾಖೆ ಮತ್ತು ಸ್ಥಳೀಯರು ಸೇರಿ ಕಾಡಾನೆಗಳನ್ನು ಓಡಿಸಿದ ಕಾರಣ ಹೆಚ್ಚಿನ ಕೃಷಿಹಾನಿ ಸಂಭವಿಸಿಲ್ಲ. ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಗ್ರಾಮಗಳು ಒಂದಕ್ಕೊಂದು ಹತ್ತಿರವಿದ್ದು ಇಲ್ಲೆಲ್ಲ ಈ ಕಾಡಾನೆಗಳ ಹಿಂಡು ಸಂಚಾರ ನಡೆಸುತ್ತಿದೆ.
ಮಿತ್ತಬಾಗಿಲು ಗ್ರಾಪಂನಿಂದ ಸ್ಥಳೀಯರಿಗೆ ಅರಣ್ಯ ಪ್ರದೇಶಗಳಲ್ಲಿ ಓಡಾಡದಂತೆ ಈಗಾಗಲೇ ಎಚ್ಚರಿಕೆ ನೀಡಿದ್ದು ಹಗಲಿನ ಹೊತ್ತು ಮುಂಜಾಗ್ರತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಈ ಗ್ರಾಮಗಳಲ್ಲಿ ಕಳೆದ 15 ವರ್ಷಗಳಿಂದ ಕಾಡಾನೆಗಳ ಕಾಟವಿದ್ದು ಇತ್ತೀಚಿನ ದಿನಗಳಲ್ಲಿ ಇದು ವಿಪರೀತವಾಗಿ ಸಾಕಷ್ಟು ಕೃಷಿ ಹಾನಿ ಜತೆಗೆ ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ ಕಾಡಾನೆಗಳ ಕಾಟಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!