25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

ಉಜಿರೆ: ಒಂದು ಕಾಲಕ್ಕೆ ಸಂಸ್ಕೃತ ಭಾಷೆಯು ಜನ ಸಾಮಾನ್ಯರ ಆಡುಭಾಷೆ ಆಗಿತ್ತು. ಈ ಕಾರಣಕ್ಕಾಗಿಯೇ ರಾಮಾಯಣ , ಮಹಾಭಾರತ ಇತ್ಯಾದಿ ಕಾವ್ಯಾದಿಗಳು ರಚನೆಯಾಗಿದ್ದವು. ಇಂತಹ ಕಾವ್ಯಗಳನ್ನು ಪ್ರೀತಿ ಇಟ್ಟು ಓದಿದರೆ ಹಾಗೂ ಆಸಕ್ತಿ ಹುಟ್ಟಿಸಿಕೊಂಡರೆ ಕಾವ್ಯಗಳನ್ನು ಹೆಚ್ಚು ಅರ್ಥೈಸಲು ಸಾಧ್ಯ. ರಾಮನ ಕಥೆಯನ್ನು ವಾಲ್ಮೀಕಿ ಕವಿಗಳು ರಾಮಾಯಣದಲ್ಲಿ ತುಂಬಾ ಚೆನ್ನಾಗಿ ಚಿತ್ರಿಸಿದ್ದಾರೆ. ರಾಮನ ಹಾಗೂ ರಾಮಾಯಣದ ಧನಾತ್ಮಕ ಅಂಶಗಳನ್ನು ಹೆಚ್ಚಾಗಿ ಸಮಾಜಕ್ಕೆ ತಲುಪಿಸಬೇಕು. ರಾಮನ ಆದರ್ಶ ಜೀವನ ಎಲ್ಲರಿಗೂ ಸ್ಫೂರ್ತಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಶ್ರೇಯಸ್ ಪಾಳಂದೆ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ನಡೆದ ವಂದೇ ವಾಲ್ಮೀಕಿ ಕೋಕಿಲಮ್ ಎನ್ನುವ ವಾಲ್ಮೀಕಿ ಸ್ಮರಣಾ ಎನ್ನುವ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಸಮೃದ್ಧಿ ಸ್ವಾಗತಿಸಿ , ತನ್ಮಯಿ ವಂದಿಸಿದರು . ಶಾಂಭವಿ ನಿರೂಪಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya
error: Content is protected !!