25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಉಜಿರೆ: ನಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ಆಹಾರ ಮತ್ತು ನೀರನ್ನು ಸೇವಿಸಬೇಕು. ಕಾಲಕ್ಕೆ ತಕ್ಕಂತೆ ನಮ್ಮ ಆಹಾರ ಕ್ರಮಗಳಲ್ಲಿಯೂ ಬದಲಾವಣೆ ಮಾಡಿಕೊಳ್ಳಬೇಕು. ಆಹಾರಾದಿಗಳನ್ನು ಎಷ್ಟು ತಿನ್ನುತ್ತೇವೆ ಎನ್ನುವುದು ಮುಖ್ಯವಲ್ಲ ಹೇಗೆ ತಿನ್ನುತ್ತೇವೆ ಎನ್ನುವುದು ಮುಖ್ಯ. ದೈಹಿಕ , ಮಾನಸಿಕ ಹಾಗೂ ಆಧ್ಯಾತ್ಮಿಕ ವ್ಯಕ್ತಿತ್ವಕ್ಕೂ ಆಹಾರ ಪ್ರಭಾವ ಬೀರುತ್ತದೆ. ಯಾವಾಗಲೂ ಸತ್ತ್ವಭರಿತ ಆಹಾರಗಳನ್ನು ಆದಷ್ಟು ಸೇವಿಸಬೇಕು. ಮಿತವಾದ , ಶುಚಿಯಾದ ಆಹಾರ ಕ್ರಮ ಯಾವಾಗಲೂ ಉತ್ತಮ. ಒಟ್ಟಾರೆ ಆಹಾರವೇ ಔಷಧವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಭಾಷಿಣಿ ಧರ್ಮಸ್ಥಳ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವತಿಯಿಂದ ನಡೆದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.
ದೀಕ್ಷಾ ಸ್ವಾಗತಿಸಿ , ಐಶ್ವರ್ಯಾ ಪಿ ಶೆಟ್ಟಿ ಪರಿಚಯಿಸಿದರು. ಅಹಲ್ಯಾ ಬೆಂಡೆ ನಿರೂಪಿಸಿ , ಅನುಜ್ಞಾ ರಾವ್ ವಂದಿಸಿದರು.

Related posts

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya
error: Content is protected !!