September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಉಜಿರೆ: ನಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ಆಹಾರ ಮತ್ತು ನೀರನ್ನು ಸೇವಿಸಬೇಕು. ಕಾಲಕ್ಕೆ ತಕ್ಕಂತೆ ನಮ್ಮ ಆಹಾರ ಕ್ರಮಗಳಲ್ಲಿಯೂ ಬದಲಾವಣೆ ಮಾಡಿಕೊಳ್ಳಬೇಕು. ಆಹಾರಾದಿಗಳನ್ನು ಎಷ್ಟು ತಿನ್ನುತ್ತೇವೆ ಎನ್ನುವುದು ಮುಖ್ಯವಲ್ಲ ಹೇಗೆ ತಿನ್ನುತ್ತೇವೆ ಎನ್ನುವುದು ಮುಖ್ಯ. ದೈಹಿಕ , ಮಾನಸಿಕ ಹಾಗೂ ಆಧ್ಯಾತ್ಮಿಕ ವ್ಯಕ್ತಿತ್ವಕ್ಕೂ ಆಹಾರ ಪ್ರಭಾವ ಬೀರುತ್ತದೆ. ಯಾವಾಗಲೂ ಸತ್ತ್ವಭರಿತ ಆಹಾರಗಳನ್ನು ಆದಷ್ಟು ಸೇವಿಸಬೇಕು. ಮಿತವಾದ , ಶುಚಿಯಾದ ಆಹಾರ ಕ್ರಮ ಯಾವಾಗಲೂ ಉತ್ತಮ. ಒಟ್ಟಾರೆ ಆಹಾರವೇ ಔಷಧವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಭಾಷಿಣಿ ಧರ್ಮಸ್ಥಳ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವತಿಯಿಂದ ನಡೆದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.
ದೀಕ್ಷಾ ಸ್ವಾಗತಿಸಿ , ಐಶ್ವರ್ಯಾ ಪಿ ಶೆಟ್ಟಿ ಪರಿಚಯಿಸಿದರು. ಅಹಲ್ಯಾ ಬೆಂಡೆ ನಿರೂಪಿಸಿ , ಅನುಜ್ಞಾ ರಾವ್ ವಂದಿಸಿದರು.

Related posts

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ತೆರೆ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya

ನಿವೃತ್ತ ಶಿಕ್ಷಕ ಶಂಕರ್ ಎನ್. ತಾಮನ್ಕರ್ ಅವರಿಂದ ರೂ.47 ಸಾವಿರ ಧನಸಹಾಯ

Suddi Udaya
error: Content is protected !!