ಬೆಳ್ತಂಗಡಿ: ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣ ಹಾಗೂ ರಫ್ತು ನಿಗಮ (state Agriculture Produce Processing and Export Corporation Limited ) ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಮಂತ್ರಾಲಯ ಹಾಗೂ KAPPEC ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ PMFME ಯೋಜನೆ ಅಡಿ ಸಾಲ ಮಂಜೂರಾತಿ ಆಗಿರುವವರು, ಅರ್ಜಿ ಸಲ್ಲಿಕೆಯಾಗಿ ಬ್ಯಾಂಕಿನಲ್ಲಿ ಪರಿಶೀಲನೆಯಲ್ಲಿರುವವರು ಮತ್ತು ಅರ್ಜಿ ತಿರಸ್ಕೃತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಅಗತ್ಯವಾದ ಕೌಶಲ್ಯ ಮತ್ತು ಜ್ಞಾನವನ್ನು ನೀಡುವ ಮೂರು ದಿನಗಳ ಉಚಿತ ತರಬೇತಿಯನ್ನು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇಲ್ಲಿ ನ.11 ರಿಂದ 13 ರವರೆಗೆ ಆಯೋಜಿಸಲಾಗಿದೆ.
ತರಬೇತಿಯಲ್ಲಿ ಪಿಎಂಎಫ್ ಎಂಇ ಯೋಜನೆಯ ಫಲಾನುಭವಿಗಳು ಭಾಗವಹಿಸಲು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರ ದೂರವಾಣಿ ಸಂಖ್ಯೆ 8277931067 ಗೆ ಕರೆ ಮಾಡಿ ನೋಂದಾಯಿಸಿಕೊಳ್ಳಬಹುದಾಗಿದೆ. ಮೊದಲು ನೋಂದಣಿ ಮಾಡಿಕೊಂಡ 30 ಜನರಿಗೆ ಮೊದಲನೇ ಬ್ಯಾಚ್ ನಲ್ಲಿ ತರಬೇತಿ ಪ್ರಾರಂಭಿಸಿ, ನಂತರ ನೋಂದಣಿ ಮಾಡಿಕೊಂಡವರಿಗೆ ಮುಂದಿನ ಬ್ಯಾಚ್ ನಲ್ಲಿ ತರಬೇತಿಯನ್ನು ನೀಡಲಾಗುವುದು. ನೋಂದಣಿ ಮಾಡಿಸಿಕೊಂಡ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್, ಪಾನ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇಲ್ಲಿ ತರಬೇತಿಗಾಗಿ ಪೂರ್ವಾಹ್ನ 10.30ಕ್ಕೆ ಭಾಗವಹಿಸಲು ತಿಳಿಸಲಾಗಿದೆ.











