24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋವಧೆಯ ಹೆಸರಿನಲ್ಲಿ ಅಕ್ರಮವಾಗಿ ಅಮಾಯಕ ಮಹಿಳೆ ಝೊಹರಾ ಅವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗ ನ.8ರಂದು ಭೇಟಿ ಮಾಡಿ ಮಾತುಕತೆ ನಡೆಸಿದರು.

ಘಟನೆಯ ವಿವರ ಪಡೆದ ನಿಯೋಗ, ಈ‌ ಬಗ್ಗೆ ನಾವು ಪೊಲೀಸ್ ಮೇಲಧಿಕಾರಿಗಳ ಜೊತೆ ಮಾತುಕತೆ ಮಾಡಿ ಇಂತಹಾ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವ ಬಗ್ಗೆ ನಿಯೋಗ ಭೇಟಿ ನೀಡುವ ಬಗ್ಗೆ ಆದ ಮಿರ್ಣಯಗಳನ್ನು ತಿಳಿಸಲಾಯಿತು. ಹಾಗೂ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಲಾಯಿತು.
ಪುತ್ತೂರು‌ ಸಹಾಯಕ ಆಯುಕ್ತರ ಆದೇಶದಂತೆ ಮನೆ ಜಪ್ತಿ‌ ತೆರವಿಗೆ ಬಂದ ಪೊಲೀಸ್ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಲಾಯಿತು.

ನಿಯೋಗದಲ್ಲಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಸಲೀಂ ಗುರುವಾಯನಕೆರೆ, ಕೆರೀಂ ಗೇರುಕಟ್ಟೆ, ಕೆ.ಎಸ್ ಅಬ್ದುಲ್ಲ ಕರಾಯ, ಲೆತೀಫ್ ಹಾಜಿ ಗುರುವಾಯನಕೆರೆ, ಮುಸ್ತಫ ಗುರುವಾಯನಕೆರೆ, ನಿಸಾರ್ ಕುದ್ರಡ್ಕ, ರಮೀಝ್ ಬೆಳ್ತಂಗಡಿ, ಉಮರ್ ಜಿ.ಕೆ, ಶಮೀಮ್ ಯೂಸುಫ್ ಮದ್ದಡ್ಕ, ಆಶ್ರಫ್ ಆಲಿಕುಂಞಿ ಮುಂಡಾಜೆ, ಹನೀಫ್ ಪುಂಜಾಲಕಟ್ಟೆ, ಅಬ್ದುಲ್ ರಹಿಮಾನ್ ಪಡ್ಪು, ಸಾಲಿಹ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya
error: Content is protected !!