July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಇಲ್ಲಿನ ಜನರಲ್ಲಿ ಆತಂಕದ ವಾತಾವರಣ ಉಂಟಾಗಿದೆ.

ಕಳೆದ ಹಲವು ದಿನಗಳಿಂದ ಇಲ್ಲಿನ ಒಂದಲ್ಲ ಒಂದು ಭಾಗದಲ್ಲಿ ಕಾಡಾನೆಗಳ ಹಿಂಡು ಕಂಡುಬರುತ್ತಿದೆ. ಸ್ಥಳೀಯರ ಪ್ರಕಾರ ಇಲ್ಲಿ ಎರಡು ಮರಿಯಾನೆ ಸಹಿತ 13 ಆನೆಗಳು ಓಡಾಡುತ್ತಿವೆ. ಕೃಷಿ ನಾಶದ ಜತೆಗೆ ಜನನಿಬಿಡ ಪ್ರದೇಶಗಳವರೆಗೂ ಕಾಡಾನೆಗಳು ಲಗ್ಗೆ ಇಡುತ್ತಿರುವುದು ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.

ನ.7ರಂದು ಸಂಜೆ 6:30 ಸಮಯ ಇಲ್ಲಿನ ಮಲೆಜೋಡಿ ಎಂಬಲ್ಲಿ ಒಂದು ಮರಿಯಾನೆ ಸಹಿತ ಎಂಟು ಕಾಡಾನೆಗಳು ಕಂಡು ಬಂದಿದೆ. ಇಲ್ಲಿಂದ ಮುಂದುವರಿದ ಹಿಂಡು ಕೋಡಿ,ಅಮೈ,ಕೂಡಾಲ,ಬೆಡಿಗುತ್ತು ಪರಿಸರಗಳಲ್ಲಿ ಓಡಾಟ ನಡೆಸಿದೆ.
ಅರಣ್ಯ ಇಲಾಖೆ ಮತ್ತು ಸ್ಥಳೀಯರು ಸೇರಿ ಕಾಡಾನೆಗಳನ್ನು ಓಡಿಸಿದ ಕಾರಣ ಹೆಚ್ಚಿನ ಕೃಷಿಹಾನಿ ಸಂಭವಿಸಿಲ್ಲ. ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಗ್ರಾಮಗಳು ಒಂದಕ್ಕೊಂದು ಹತ್ತಿರವಿದ್ದು ಇಲ್ಲೆಲ್ಲ ಈ ಕಾಡಾನೆಗಳ ಹಿಂಡು ಸಂಚಾರ ನಡೆಸುತ್ತಿದೆ.
ಮಿತ್ತಬಾಗಿಲು ಗ್ರಾಪಂನಿಂದ ಸ್ಥಳೀಯರಿಗೆ ಅರಣ್ಯ ಪ್ರದೇಶಗಳಲ್ಲಿ ಓಡಾಡದಂತೆ ಈಗಾಗಲೇ ಎಚ್ಚರಿಕೆ ನೀಡಿದ್ದು ಹಗಲಿನ ಹೊತ್ತು ಮುಂಜಾಗ್ರತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಈ ಗ್ರಾಮಗಳಲ್ಲಿ ಕಳೆದ 15 ವರ್ಷಗಳಿಂದ ಕಾಡಾನೆಗಳ ಕಾಟವಿದ್ದು ಇತ್ತೀಚಿನ ದಿನಗಳಲ್ಲಿ ಇದು ವಿಪರೀತವಾಗಿ ಸಾಕಷ್ಟು ಕೃಷಿ ಹಾನಿ ಜತೆಗೆ ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ ಕಾಡಾನೆಗಳ ಕಾಟಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

Suddi Udaya

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya
error: Content is protected !!