September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಇಲ್ಲಿನ ಜನರಲ್ಲಿ ಆತಂಕದ ವಾತಾವರಣ ಉಂಟಾಗಿದೆ.

ಕಳೆದ ಹಲವು ದಿನಗಳಿಂದ ಇಲ್ಲಿನ ಒಂದಲ್ಲ ಒಂದು ಭಾಗದಲ್ಲಿ ಕಾಡಾನೆಗಳ ಹಿಂಡು ಕಂಡುಬರುತ್ತಿದೆ. ಸ್ಥಳೀಯರ ಪ್ರಕಾರ ಇಲ್ಲಿ ಎರಡು ಮರಿಯಾನೆ ಸಹಿತ 13 ಆನೆಗಳು ಓಡಾಡುತ್ತಿವೆ. ಕೃಷಿ ನಾಶದ ಜತೆಗೆ ಜನನಿಬಿಡ ಪ್ರದೇಶಗಳವರೆಗೂ ಕಾಡಾನೆಗಳು ಲಗ್ಗೆ ಇಡುತ್ತಿರುವುದು ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.

ನ.7ರಂದು ಸಂಜೆ 6:30 ಸಮಯ ಇಲ್ಲಿನ ಮಲೆಜೋಡಿ ಎಂಬಲ್ಲಿ ಒಂದು ಮರಿಯಾನೆ ಸಹಿತ ಎಂಟು ಕಾಡಾನೆಗಳು ಕಂಡು ಬಂದಿದೆ. ಇಲ್ಲಿಂದ ಮುಂದುವರಿದ ಹಿಂಡು ಕೋಡಿ,ಅಮೈ,ಕೂಡಾಲ,ಬೆಡಿಗುತ್ತು ಪರಿಸರಗಳಲ್ಲಿ ಓಡಾಟ ನಡೆಸಿದೆ.
ಅರಣ್ಯ ಇಲಾಖೆ ಮತ್ತು ಸ್ಥಳೀಯರು ಸೇರಿ ಕಾಡಾನೆಗಳನ್ನು ಓಡಿಸಿದ ಕಾರಣ ಹೆಚ್ಚಿನ ಕೃಷಿಹಾನಿ ಸಂಭವಿಸಿಲ್ಲ. ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಗ್ರಾಮಗಳು ಒಂದಕ್ಕೊಂದು ಹತ್ತಿರವಿದ್ದು ಇಲ್ಲೆಲ್ಲ ಈ ಕಾಡಾನೆಗಳ ಹಿಂಡು ಸಂಚಾರ ನಡೆಸುತ್ತಿದೆ.
ಮಿತ್ತಬಾಗಿಲು ಗ್ರಾಪಂನಿಂದ ಸ್ಥಳೀಯರಿಗೆ ಅರಣ್ಯ ಪ್ರದೇಶಗಳಲ್ಲಿ ಓಡಾಡದಂತೆ ಈಗಾಗಲೇ ಎಚ್ಚರಿಕೆ ನೀಡಿದ್ದು ಹಗಲಿನ ಹೊತ್ತು ಮುಂಜಾಗ್ರತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಈ ಗ್ರಾಮಗಳಲ್ಲಿ ಕಳೆದ 15 ವರ್ಷಗಳಿಂದ ಕಾಡಾನೆಗಳ ಕಾಟವಿದ್ದು ಇತ್ತೀಚಿನ ದಿನಗಳಲ್ಲಿ ಇದು ವಿಪರೀತವಾಗಿ ಸಾಕಷ್ಟು ಕೃಷಿ ಹಾನಿ ಜತೆಗೆ ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ ಕಾಡಾನೆಗಳ ಕಾಟಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya
error: Content is protected !!