27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಉಜಿರೆ: ನಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ಆಹಾರ ಮತ್ತು ನೀರನ್ನು ಸೇವಿಸಬೇಕು. ಕಾಲಕ್ಕೆ ತಕ್ಕಂತೆ ನಮ್ಮ ಆಹಾರ ಕ್ರಮಗಳಲ್ಲಿಯೂ ಬದಲಾವಣೆ ಮಾಡಿಕೊಳ್ಳಬೇಕು. ಆಹಾರಾದಿಗಳನ್ನು ಎಷ್ಟು ತಿನ್ನುತ್ತೇವೆ ಎನ್ನುವುದು ಮುಖ್ಯವಲ್ಲ ಹೇಗೆ ತಿನ್ನುತ್ತೇವೆ ಎನ್ನುವುದು ಮುಖ್ಯ. ದೈಹಿಕ , ಮಾನಸಿಕ ಹಾಗೂ ಆಧ್ಯಾತ್ಮಿಕ ವ್ಯಕ್ತಿತ್ವಕ್ಕೂ ಆಹಾರ ಪ್ರಭಾವ ಬೀರುತ್ತದೆ. ಯಾವಾಗಲೂ ಸತ್ತ್ವಭರಿತ ಆಹಾರಗಳನ್ನು ಆದಷ್ಟು ಸೇವಿಸಬೇಕು. ಮಿತವಾದ , ಶುಚಿಯಾದ ಆಹಾರ ಕ್ರಮ ಯಾವಾಗಲೂ ಉತ್ತಮ. ಒಟ್ಟಾರೆ ಆಹಾರವೇ ಔಷಧವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಭಾಷಿಣಿ ಧರ್ಮಸ್ಥಳ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವತಿಯಿಂದ ನಡೆದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.
ದೀಕ್ಷಾ ಸ್ವಾಗತಿಸಿ , ಐಶ್ವರ್ಯಾ ಪಿ ಶೆಟ್ಟಿ ಪರಿಚಯಿಸಿದರು. ಅಹಲ್ಯಾ ಬೆಂಡೆ ನಿರೂಪಿಸಿ , ಅನುಜ್ಞಾ ರಾವ್ ವಂದಿಸಿದರು.

Related posts

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya
error: Content is protected !!