September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಉಜಿರೆ: ನಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ಆಹಾರ ಮತ್ತು ನೀರನ್ನು ಸೇವಿಸಬೇಕು. ಕಾಲಕ್ಕೆ ತಕ್ಕಂತೆ ನಮ್ಮ ಆಹಾರ ಕ್ರಮಗಳಲ್ಲಿಯೂ ಬದಲಾವಣೆ ಮಾಡಿಕೊಳ್ಳಬೇಕು. ಆಹಾರಾದಿಗಳನ್ನು ಎಷ್ಟು ತಿನ್ನುತ್ತೇವೆ ಎನ್ನುವುದು ಮುಖ್ಯವಲ್ಲ ಹೇಗೆ ತಿನ್ನುತ್ತೇವೆ ಎನ್ನುವುದು ಮುಖ್ಯ. ದೈಹಿಕ , ಮಾನಸಿಕ ಹಾಗೂ ಆಧ್ಯಾತ್ಮಿಕ ವ್ಯಕ್ತಿತ್ವಕ್ಕೂ ಆಹಾರ ಪ್ರಭಾವ ಬೀರುತ್ತದೆ. ಯಾವಾಗಲೂ ಸತ್ತ್ವಭರಿತ ಆಹಾರಗಳನ್ನು ಆದಷ್ಟು ಸೇವಿಸಬೇಕು. ಮಿತವಾದ , ಶುಚಿಯಾದ ಆಹಾರ ಕ್ರಮ ಯಾವಾಗಲೂ ಉತ್ತಮ. ಒಟ್ಟಾರೆ ಆಹಾರವೇ ಔಷಧವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಭಾಷಿಣಿ ಧರ್ಮಸ್ಥಳ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವತಿಯಿಂದ ನಡೆದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.
ದೀಕ್ಷಾ ಸ್ವಾಗತಿಸಿ , ಐಶ್ವರ್ಯಾ ಪಿ ಶೆಟ್ಟಿ ಪರಿಚಯಿಸಿದರು. ಅಹಲ್ಯಾ ಬೆಂಡೆ ನಿರೂಪಿಸಿ , ಅನುಜ್ಞಾ ರಾವ್ ವಂದಿಸಿದರು.

Related posts

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya
error: Content is protected !!