22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋವಧೆಯ ಹೆಸರಿನಲ್ಲಿ ಅಕ್ರಮವಾಗಿ ಅಮಾಯಕ ಮಹಿಳೆ ಝೊಹರಾ ಅವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗ ನ.8ರಂದು ಭೇಟಿ ಮಾಡಿ ಮಾತುಕತೆ ನಡೆಸಿದರು.

ಘಟನೆಯ ವಿವರ ಪಡೆದ ನಿಯೋಗ, ಈ‌ ಬಗ್ಗೆ ನಾವು ಪೊಲೀಸ್ ಮೇಲಧಿಕಾರಿಗಳ ಜೊತೆ ಮಾತುಕತೆ ಮಾಡಿ ಇಂತಹಾ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವ ಬಗ್ಗೆ ನಿಯೋಗ ಭೇಟಿ ನೀಡುವ ಬಗ್ಗೆ ಆದ ಮಿರ್ಣಯಗಳನ್ನು ತಿಳಿಸಲಾಯಿತು. ಹಾಗೂ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಲಾಯಿತು.
ಪುತ್ತೂರು‌ ಸಹಾಯಕ ಆಯುಕ್ತರ ಆದೇಶದಂತೆ ಮನೆ ಜಪ್ತಿ‌ ತೆರವಿಗೆ ಬಂದ ಪೊಲೀಸ್ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಲಾಯಿತು.

ನಿಯೋಗದಲ್ಲಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಸಲೀಂ ಗುರುವಾಯನಕೆರೆ, ಕೆರೀಂ ಗೇರುಕಟ್ಟೆ, ಕೆ.ಎಸ್ ಅಬ್ದುಲ್ಲ ಕರಾಯ, ಲೆತೀಫ್ ಹಾಜಿ ಗುರುವಾಯನಕೆರೆ, ಮುಸ್ತಫ ಗುರುವಾಯನಕೆರೆ, ನಿಸಾರ್ ಕುದ್ರಡ್ಕ, ರಮೀಝ್ ಬೆಳ್ತಂಗಡಿ, ಉಮರ್ ಜಿ.ಕೆ, ಶಮೀಮ್ ಯೂಸುಫ್ ಮದ್ದಡ್ಕ, ಆಶ್ರಫ್ ಆಲಿಕುಂಞಿ ಮುಂಡಾಜೆ, ಹನೀಫ್ ಪುಂಜಾಲಕಟ್ಟೆ, ಅಬ್ದುಲ್ ರಹಿಮಾನ್ ಪಡ್ಪು, ಸಾಲಿಹ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ ಟೆಕ್ನಿಷಿಯನ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!