23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋವಧೆಯ ಹೆಸರಿನಲ್ಲಿ ಅಕ್ರಮವಾಗಿ ಅಮಾಯಕ ಮಹಿಳೆ ಝೊಹರಾ ಅವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗ ನ.8ರಂದು ಭೇಟಿ ಮಾಡಿ ಮಾತುಕತೆ ನಡೆಸಿದರು.

ಘಟನೆಯ ವಿವರ ಪಡೆದ ನಿಯೋಗ, ಈ‌ ಬಗ್ಗೆ ನಾವು ಪೊಲೀಸ್ ಮೇಲಧಿಕಾರಿಗಳ ಜೊತೆ ಮಾತುಕತೆ ಮಾಡಿ ಇಂತಹಾ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವ ಬಗ್ಗೆ ನಿಯೋಗ ಭೇಟಿ ನೀಡುವ ಬಗ್ಗೆ ಆದ ಮಿರ್ಣಯಗಳನ್ನು ತಿಳಿಸಲಾಯಿತು. ಹಾಗೂ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಲಾಯಿತು.
ಪುತ್ತೂರು‌ ಸಹಾಯಕ ಆಯುಕ್ತರ ಆದೇಶದಂತೆ ಮನೆ ಜಪ್ತಿ‌ ತೆರವಿಗೆ ಬಂದ ಪೊಲೀಸ್ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಲಾಯಿತು.

ನಿಯೋಗದಲ್ಲಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಸಲೀಂ ಗುರುವಾಯನಕೆರೆ, ಕೆರೀಂ ಗೇರುಕಟ್ಟೆ, ಕೆ.ಎಸ್ ಅಬ್ದುಲ್ಲ ಕರಾಯ, ಲೆತೀಫ್ ಹಾಜಿ ಗುರುವಾಯನಕೆರೆ, ಮುಸ್ತಫ ಗುರುವಾಯನಕೆರೆ, ನಿಸಾರ್ ಕುದ್ರಡ್ಕ, ರಮೀಝ್ ಬೆಳ್ತಂಗಡಿ, ಉಮರ್ ಜಿ.ಕೆ, ಶಮೀಮ್ ಯೂಸುಫ್ ಮದ್ದಡ್ಕ, ಆಶ್ರಫ್ ಆಲಿಕುಂಞಿ ಮುಂಡಾಜೆ, ಹನೀಫ್ ಪುಂಜಾಲಕಟ್ಟೆ, ಅಬ್ದುಲ್ ರಹಿಮಾನ್ ಪಡ್ಪು, ಸಾಲಿಹ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

Suddi Udaya

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

Suddi Udaya
error: Content is protected !!