24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ತಾಲೂಕಿನಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಆರಂಭ ಗೊಂಡು ಪ್ರಖ್ಯಾತಿಗಳಿಸಿರುವ ಜವಳಿ ಮಳಿಗೆ ಆನ್ ಸಿಲ್ಕ್ ನ ಸಹ ಸಂಸ್ಥೆ ಹೋಲ್ ಸೇಲ್ ಹಾಗೂ ರಖಂ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ ‘ಆನ್‌ಪ್ಲೈ’
ಲಾಯಿಲ ವಿಆರ್‌ಎಲ್ ಕಚೇರಿ ಹತ್ತಿರದ ಸಿಕ್ವೇರ ಕಂಪೌಂಡ್‌ನಲ್ಲಿ ನ.8 ರಂದು ಶುಭಾರಂಭ ಗೊಂಡಿತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೇಮ್ಸ್ ಪಟ್ಟೇರಿಲ್ ನೂತನ ಸಂಸ್ಥೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಡಾ. ಲಾರೆನ್ಸ್ ಮುಕ್ಕುಯಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಬಳಿಕ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೇಮ್ಸ್ ಪಟ್ಟೇರಿಲ್ ಪ್ರಾಥ೯ನಾ‌ ವಿಧಿಯನ್ನು ನೆರವೇರಿಸಿ, ನೂತನ ಸಂಸ್ಥೆಗೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಮಂಗಳೂರು ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಕೆ. ಹರೀಶ್ ಕುಮಾರ್, ಬದ್ಯಾರು ಸೈಂಟ್ ರಾಫೆಲ್ ಚರ್ಚ್ ಧರ್ಮಗುರು ಫಾ| ರೋಶನ್ ಕ್ರಾಸ್ತ , ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಧ್ಯಕ್ಷ ಸುರೇಶ್ ಬಂಗೇರ ಎಂ.ಡಿ., ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೊ, ದಾರುಸ್ಸಲಾಂ ಎಜ್ಯುಕೇಶನ್ ಸೆಂಟರ್ ಚೇಯರ್‌ಮೆನ್ ಸಯ್ಯದ್ ಝೈನುಲ್ ಅಬಿದೀನ್ ಜಿಫ್ರಿ ತಂಙಳ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷೆ ಸುಗಂಧಿ, ಸಿಕ್ವೇರಾ ಕಾಂಪ್ಲೆಕ್ಸ್ ಮಾಲಕ ಕ್ಲಿಟಸ್ ವಿಜಯ್ ವಿಲ್ಪ್ರೆಡ್ ಸಿಕ್ವೇರಾ, ಬೆಳ್ತಂಗಡಿ ಧರ್ಮಪ್ರಾಂತ್ಯ ಕೆಪಿಸಿಡಿಸಿ ಸಂಯೋಜಕ ಜೈಸನ್ ಪಟ್ಟೇರಿ, ಕೆಎಸ್‌ಎಂಸಿಎ ಬೆಳ್ತಂಗಡಿ ಘಟಕ ಅಧ್ಯಕ್ಷ ರೆಜಿ ಜಾರ್ಜ್ ಉಪಸ್ಥಿತರಿದ್ದರು.

ಆಡಳಿತ ಪಾಲುದಾರರಾದ ಯೇಸುದಾಸ್ ಎನ್.ಜೆ., ಶ್ರೀಮತಿ ಡಯಾನಾ ಮತ್ತು ಜೀವನ್ ಜೀಸನ್, ಜಿಸ್ನಾ (ಆನ್ ಮರಿಯ) ಆಗಮಿಸಿದ ಅತಿಥಿ-ಗಣ್ಯರನ್ನು ಗೌರವಿಸಿದರು. ಫ್ರಾನ್ಸಿಸ್ ವಿ.ವಿ ಮಡಂತ್ಯಾರು ಕಾಯ೯ಕ್ರಮ ನಿರೂಪಿಸಿದರು. ಜೀವನ್ ಧನ್ಯವಾದವಿತ್ತರು.

ಎಲ್ಲವೂ ಒಂದೇ ಸೂರಿನಡಿಯಲ್ಲಿ ಲಭ್ಯ: ನೂತನ ಸಂಸ್ಥೆಯಲ್ಲಿ ಹೋಲ್‌ಸೇಲ್ ಹಾಗೂ ರಖಂ ದರದಲ್ಲಿ ಇರುವ ಉತ್ಪನ್ನಗಳು ಪ್ಲೈವುಡ್, ಬ್ಲಾಕ್ ಬೋರ್ಡ್, ಫ್ಲಶ್ ಡೋರ್, ಲ್ಯಾಮಿನೇಟ್, ಹಾರ್ಡ್ವೇರ್, ವೆನೀರ್, MDF&HDMR ಬೋರ್ಡ್ಗಳು, ಪಿವಿಸಿ ಫೋಮ್ ಬೋರ್ಡ್, WPC ಡೋರ್ ಮತ್ತು ಫ್ರೇಮ್, ಮೆಂಬರನೇ ಡೋರ್, WPC ಬೋರ್ಡ್ಗಳು, ಪಾರ್ಟಿಕಲ್ ಬೋರ್ಡ್ಗಳು ಇತ್ಯಾದಿ ಲಭ್ಯವಿದೆ.

Related posts

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya
error: Content is protected !!