July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಇಲ್ಲಿನ ಜನರಲ್ಲಿ ಆತಂಕದ ವಾತಾವರಣ ಉಂಟಾಗಿದೆ.

ಕಳೆದ ಹಲವು ದಿನಗಳಿಂದ ಇಲ್ಲಿನ ಒಂದಲ್ಲ ಒಂದು ಭಾಗದಲ್ಲಿ ಕಾಡಾನೆಗಳ ಹಿಂಡು ಕಂಡುಬರುತ್ತಿದೆ. ಸ್ಥಳೀಯರ ಪ್ರಕಾರ ಇಲ್ಲಿ ಎರಡು ಮರಿಯಾನೆ ಸಹಿತ 13 ಆನೆಗಳು ಓಡಾಡುತ್ತಿವೆ. ಕೃಷಿ ನಾಶದ ಜತೆಗೆ ಜನನಿಬಿಡ ಪ್ರದೇಶಗಳವರೆಗೂ ಕಾಡಾನೆಗಳು ಲಗ್ಗೆ ಇಡುತ್ತಿರುವುದು ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.

ನ.7ರಂದು ಸಂಜೆ 6:30 ಸಮಯ ಇಲ್ಲಿನ ಮಲೆಜೋಡಿ ಎಂಬಲ್ಲಿ ಒಂದು ಮರಿಯಾನೆ ಸಹಿತ ಎಂಟು ಕಾಡಾನೆಗಳು ಕಂಡು ಬಂದಿದೆ. ಇಲ್ಲಿಂದ ಮುಂದುವರಿದ ಹಿಂಡು ಕೋಡಿ,ಅಮೈ,ಕೂಡಾಲ,ಬೆಡಿಗುತ್ತು ಪರಿಸರಗಳಲ್ಲಿ ಓಡಾಟ ನಡೆಸಿದೆ.
ಅರಣ್ಯ ಇಲಾಖೆ ಮತ್ತು ಸ್ಥಳೀಯರು ಸೇರಿ ಕಾಡಾನೆಗಳನ್ನು ಓಡಿಸಿದ ಕಾರಣ ಹೆಚ್ಚಿನ ಕೃಷಿಹಾನಿ ಸಂಭವಿಸಿಲ್ಲ. ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಗ್ರಾಮಗಳು ಒಂದಕ್ಕೊಂದು ಹತ್ತಿರವಿದ್ದು ಇಲ್ಲೆಲ್ಲ ಈ ಕಾಡಾನೆಗಳ ಹಿಂಡು ಸಂಚಾರ ನಡೆಸುತ್ತಿದೆ.
ಮಿತ್ತಬಾಗಿಲು ಗ್ರಾಪಂನಿಂದ ಸ್ಥಳೀಯರಿಗೆ ಅರಣ್ಯ ಪ್ರದೇಶಗಳಲ್ಲಿ ಓಡಾಡದಂತೆ ಈಗಾಗಲೇ ಎಚ್ಚರಿಕೆ ನೀಡಿದ್ದು ಹಗಲಿನ ಹೊತ್ತು ಮುಂಜಾಗ್ರತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಈ ಗ್ರಾಮಗಳಲ್ಲಿ ಕಳೆದ 15 ವರ್ಷಗಳಿಂದ ಕಾಡಾನೆಗಳ ಕಾಟವಿದ್ದು ಇತ್ತೀಚಿನ ದಿನಗಳಲ್ಲಿ ಇದು ವಿಪರೀತವಾಗಿ ಸಾಕಷ್ಟು ಕೃಷಿ ಹಾನಿ ಜತೆಗೆ ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ ಕಾಡಾನೆಗಳ ಕಾಟಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

Suddi Udaya

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya
error: Content is protected !!